ಕಂಪ್ಲಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀ ರಾಮನವಮಿ ಆಚರಣೆ
Sri Ram Navami Celebrations at Kampli Shirdi Sai Baba Temple
ಲೋಕದರ್ಶನ ವರದಿ
ಕಂಪ್ಲಿ 27: ಪಟ್ಟಣದ ಸನಾಪೇಟೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀರಾಮ ನವಮಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಶ್ರೀರಾಮ ನವಮಿ ಅಂಗವಾಗಿ ಶ್ರೀಸಾಯಿಬಾಬಾ ಅವರ ಅಮೃತಶಿಲಾ ಮೂರ್ತಿಗೆ ಬೆಳಿಗ್ಗೆ ಕಾಕಡ ಆರತಿ,ಪಂಚಾಮೃತ ಅಭಿಷೇಕ, ಅಲಂಕಾರ,ಅಷ್ಟೋತ್ತರ ಹಾಗೂ ಮಹಾಮಂಗಳಾರತಿ ಮಾಡಲಾಯಿತು.
ನಂತರ ಪುರೋಹಿತರಾದ ರಾಜೇಂದ್ರ ಜ್ಯೋಷಿಯವರ ನೇತೃತ್ವದಲ್ಲಿ ಶ್ರೀರಾಮಚಂದ್ರ,ಲಕ್ಷ್ಮಣ ಹಾಗೂ ಸೀತೆಯ ಭಾವಚಿತ್ರಕ್ಕೆ ವಿವಿಧ ಅಭಿಷೇಕಗಳನ್ನು ಮಾಡಿ, ವಿವಿಧ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಿದರು.
ನಂತರ ಮಂದಿರಕ್ಕೆ ಆಗಮಿಸಿದ್ದ ಸಕಲ ಸದ್ಭಕ್ತರಿಗೆ ಶ್ರೀರಾಮ ನವಮಿಯ ಪ್ರಯುಕ್ತವಾಗಿ ತೀರ್ಥ, ಕೋಸಂಬರಿ, ಪಾನಕ ಹಾಗೂ ಸಿಹಿ ಪ್ರಸಾದವನ್ನು ವಿತರಿಸಿದರು. ಸಂಜೆ ಸಾಯಿಬಾಬಾ ಭಾವಚಿತ್ರಕ್ಕೆ ಚಂದನಾ ಸೇವೆ, ಸಂಧ್ಯಾರತಿ, ಪಲ್ಲಕ್ಕಿ ಸೇವೆ, ರಾತ್ರಿ ಶೇಷ ಆರತಿ ಕಾಯರಕ್ರಮಗಳು ಜರುಗಿದವು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 