ಶ್ರೀ ಸಾಯಿ ಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ
Sri Ram Navami celebrations at Sri Sai Temple
ಲೋಕದರ್ಶನ ವರದಿ
ಶಿಗ್ಗಾವಿ 27 : ಶ್ರೀಸಾಯಿ ಮಂದಿರದಲ್ಲಿ ಶ್ರೀರಾಮನವಮಿ ನಿಮಿತ್ಯ ಶ್ರೀರಾಮ, ಸಾಯಿಬಾಬಾ ಮೂರ್ತಿಗಳಿಗೆ ವಿಶೇಷವಾದ ಫಲ ಪುಷ್ಪಗಳ ಅಲಂಕಾರದೊಂದಿಗೆ ಪೂಜೆ ಸಲ್ಲಿಸಿ ಶ್ರೀಸಾಯಿ ಬಾಬಾ ಮೂರ್ತಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕ ಮಾಡಲಾಯಿತು. ಮಧ್ಯಾಹ್ನ ಶ್ರೀರಾಮನ ಮೂರ್ತಿಯನ್ನು ತೊಟ್ಟಿಲಲ್ಲಿ ಹಾಕಿ ವಿಶೇಷ ಪೂಜೆಗಳೊಂದಿಗೆ ತೊಟ್ಟಿಲೋತ್ಸವ ಸಾಯಿ ನಗರದಲ್ಲಿ ನೇರವೇರಿಸಲಾಯಿತು. ನಂತರ ಮುತ್ತೈದೆಯರಿಗೆ ಉಡಿ ತುಂಬುವ ಮೂಲಕ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶಶಿಧರ್ ಸುರಗಿಮಠ, ಬಸವರಾಜ ಹೆಸರೂರ, ವಿಶ್ವನಾಥ್ ವಾಲಿ ಶೆಟ್ಟರ್, ವಿ ಎಸ್ ಪಾಟೀಲ್. ಮಂಜುನಾಥ್ ಬಾಣದ, ನಾಗಯ್ಯ ಹಿರೇಮಠ, ಉಮೇಶ್ ಗೌಳಿ, ಕಲ್ಲಪ್ಪ ಹೆಸರೂರ, ತೋಟಯ್ಯ ಕುಂಬಾರಗೆರಿಮಠ, ಗುರುನಾಥ ಅಣ್ಣಿಗೇರಿ,ನವೀನ್ ಸಾಸನೂರ್, ವಿಶ್ವನಾಥ ಗಾಣಿಗೇರ್, ಪ್ರಸಾದ್ ಹಿರೇಮಠ ಸೇರಿದಂತೆ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 