ಶ್ರೀರಾಮ ನವಮಿ ತೊಟ್ಟಿಲೋತ್ಸವ
Sri Rama Navami Tottilotsava
ಲೋಕದರ್ಶನ ವರದಿ
ಹಾನಗಲ್ 28: ಇಲ್ಲಿನ ರಾಮದೇವರ ದೇವಸ್ಥಾನದಲ್ಲಿ ಶ್ರೀರಾಮ ನವಮಿ ಅಂಗವಾಗಿ ನಡೆದ ತೊಟ್ಟಿಲೋತ್ಸವದಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿದರು. ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಹೋಮ, ಹವನಗಳು ನಡೆದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆದರು. ಶ್ರೀರಾಮನ ಮೂರ್ತಿಯನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಈ ವೇಳೆ ಶಾಸಕ ಮಾನೆ, ಶ್ರೀರಾಮನು ಸತ್ಯ, ಧರ್ಮ ಮತ್ತು ನೀತಿಯ ಪ್ರತೀಕ. ಇಂದಿನ ಯುವ ಜನತೆ ಶ್ರೀರಾಮನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಒಗ್ಗಟ್ಟು ಬೆಳೆಸುವಲ್ಲಿ ಶ್ರೀರಾಮ ನವಮಿಯ ಮಹತ್ವ ಅಪಾರವಾಗಿದೆ ಎಂದು ತಿಳಿಸಿದರು.
ಪ್ರಮುಖರಾದ ರವಿ ದೇಶಪಾಂಡೆ, ಘನಶಾಮ ದೇಶಪಾಂಡೆ, ಆದರ್ಶ ಶೆಟ್ಟಿ, ವಿದ್ಯಾಶಂಕರ ದೇಶಪಾಂಡೆ, ಪ್ರಮೋದ ದೇಸಾಯಿ, ಭಾಸ್ಕರ್ ಸೋಹನೆ, ವಿನಯ ಬಂಕನಾಳ, ಈರಣ್ಣ ಕಳಸದ, ಗಾಯಿತ್ರಿ ದೇಸಾಯಿ ಸೇರಿದಂತೆ ಇನ್ನಿತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 