ತಾರಾಪೂರ ಗ್ರಾಮದಲ್ಲಿ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ
Sri Tarakeshwara Jatra Mahotsav in Tarapur village
ಆಲಮೇಲ 12: ತಾಲ್ಲೂಕಿನ ಭೀಮಾ ನದಿಯ ದಂಡೆಯಲ್ಲಿ ಇರುವ ಕಾಶಿಯ ಕಡಿಯ ಬಾಗಿಲೆಂದು ಹೆಸರುವಾಸಿಯಾಗಿರು ಸುಕ್ಷೇತ್ರ ತಾರಾಪೂರ ಗ್ರಾಮದಲ್ಲಿ ದಿನಾಂಕ 12/3/2026 ರವಿವಾರ ರಂದು.ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ತಾರಕೇಶ್ವರ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು.ಬೆಳಿಗ್ಗೆ 7=00 ಗಂಟೆಗೆ ಶ್ರೀ ಷ ಬ್ರ ಗುರುಲಿಂಗ ಶಿವಾಚಾರ್ಯರು ಶ್ರೀ ಗುರು ಸಂಸ್ಥಾನ ಹಿರೇಮಠ ತಾರಾಪೂರ ಇವರಿಂದ ಶ್ರೀ ತಾರಕೇಶ್ವರ ದೇವರ ಲಿಂಗಕ್ಕೆ ರುದ್ರ ಅಭಿಷೇಕ ಬಿಲ್ವಾರ್ಚನೆ ನಡೆಯಿತು.ಬೆಳಿಗ್ಗೆ 8=00 ಗಂಟೆಗೆ ಶ್ರೀ ತಾರಕೇಶ್ವರ ದೇವರ ಪಲ್ಲಕ್ಕಿಯು ಗಂಗಸ್ಥಳ ಮಾಡಿಕೊಂಡು.
ಪುರವಂತರೊಂದಿಗೆ ಸುಮಂಗಲಿಯರಿಂದ ಕಳಸ ದೊಂದಿಗೆ ಸಕಲ ವಾದ್ಯ ವೈಭವದುಗಳೊಂದಿಗೆ ಮೇಲಿನ ಗುಡಿಯಿಂದ ಪಲ್ಲಕ್ಕಿ ಮೆರವಣಿಗೆಯನ್ನು ಪ್ರಮುಖ ಬೀದಿಗಳ ಮೂಲಕ ಶ್ರೀ ತಾರಕೇಶ್ವರ ದೇವರ ಗುಡಿಗೆ ತಲುಪಿತ್ತು.ನಂತರ ಮಧ್ಯಾಹ್ನ 12=00 ಗಂಟೆಗೆ ಶ್ರೀ ತಾರಕೇಶ್ವರ ದೇವರ ಪಲ್ಲಕ್ಕಿಯೊಂದಿಗೆ ಅಗ್ನಿ ಪ್ರವೇಶ ಮಾಡಲಾಯಿತು.ನಂತರ ಜಾತ್ರೆಗೆ ಬಂದಂತ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಊರಿನ ಹಿರಿಯರು ಮಹಿಳೆಯರು ಯುವಕರು ಹಾಗೂ ಶ್ರೀ ತಾರಕೇಶ್ವರ ದೇವಾಲಯ ಅಭಿವೃದ್ಧಿ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 