ಶ್ರೀನಗರ- ಬರಾಮುಲ್ಲ ರೈಲು ಸೇವೆ ನಾಳೆಯಿಂದ ಪುನಾರಂಭ
ಶ್ರೀನಗರ, ನ 11 : ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರ ಹಾಗೂ ಮಧ್ಯ ಕಾಶ್ಮೀರದ ಬಡ್ಗಮ್ ಪ್ರದೇಶದ ನಡುವೆ ಕಳೆದ 99 ದಿನಗಳಿಂದ ಸ್ಥಗತಗೊಂಡಿದ್ದ ರೈಲು ಸಂಚಾರ ಮಂಗಳವಾರದಿಂದ ಪುನಾರಂಭಗೊಳ್ಳಲಿದ್ದು, ಸೋಮವಾರ ಪ್ರಾಯೋಗಿಕ ಸಂಚಾರ ನಡೆಸಿತು.
ಜೊತೆಗೆ, ಶ್ರೀನಗರ ಮತ್ತು ಬನಿಹಾಲ್ ಪ್ರದೇಶದ ನಡುವಿನ ಪ್ರಾಯೋಗಿಕ ರೈಲು ಸಂಚಾರ ನ.16ರಂದು ಕೊನೆಗೊಳ್ಳಲಿದ್ದು, ನ.17ರಂದು ರೈಲು ಸಂಚಾರ ಪುನಾರಂಭಗೊಳ್ಳಲಿದೆ.
ವಿಭಾಗೀಯ ಅಧಿಕಾರಿಗಳು ರೈಲ್ವೆ ಇಲಾಖೆಗೆ ನೀಡಿದ ನಿರ್ದೇಶನದ ಬೆನ್ನಲ್ಲೇ ಈ ರೈಲು ಸೇವೆ ಪುನಾರಂಭಗೊಳ್ಳಲಿದೆ. ಆಗಸ್ಟ್ 5ರಂದು ಈ ಸೇವೆ ಸ್ಥಗಿತಗೊಂಡಿತ್ತು.
ರೈಲ್ವೆ ಅಧಿಕಾರಿಯೊಬ್ಬರು ಯುಎನ್ ಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದು, ಸೋಮವಾರ ಶ್ರೀನಗರ-ಬರಾಮುಲ್ಲಾ ರೈಲ್ವೆ ಹಳಿಯ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಆದ್ದರಿಂದ ಮಂಗಳವಾರದಿಂದ ಹಿಂದಿನಂತೆ ರೈಲು ಸೇವೆ ಮುಂದುವರಿಯಲಿದೆ ಎಂದಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಭದ್ರತಾ ಕಾರಣಕ್ಕಾಗಿ ಉತ್ತರ ಕಾಶ್ಮೀರದ ಬರಾಮುಲ್ಲದಿಂದ ಜಮ್ಮು ಪ್ರದೇಶದ ಬನಿಹಾಲ್ ಪ್ರದೇಶಕ್ಕೆ ಶ್ರೀನಗರ, ಅನಂತನಾಗ್ ಮತ್ತು ಕಾಜಿಗುಂಡ್ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದ ರೈಲು ಸೇವೆ ಸ್ಥಗಿತಗೊಳಿಸಲಾಗಿತ್ತು. ಇದರಿಂದ ರೈಲ್ವೇ ಇಲಾಖೆಗೆ 2.97 ಕೋಟಿ ರೂ. ನಷ್ಟ ಉಂಟಾಗಿತ್ತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 