ಭಕ್ತರಿಗೆ ಇಂದಿನಿಂದ ಶೃಂಗೇರಿ ಶಾರದಾಂಬೆ ದರ್ಶನಭಾಗ್ಯ ....!!
ಬೆಂಗಳೂರು , ಜೂನ್ 8, ರಾಜ್ಯದಲ್ಲಿ ಭಕ್ತರಪಾಲಿಗೆ ಇಂದಿನಿಂದ ದೇವ -ದೇವತೆಗಳ ದರ್ಶನ ಭಾಗ್ಯ ...!ಅಂತೆಯೇ ಶೃಂಗೇರಿ ಶಾರದಾಂಬೆ ದೇವಾಲಯ ಕೂಡ ಇಂದಿನಿಂದ ಭಕ್ತರ ಪಾಲಿಗೆ ತೆರೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯದ ಅನೇಕ ದೇವಾಲಯಗಳು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ದೇವಾಲಯಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಂತೆಯೇ ಶೃಂಗೇರಿ ಶಾರದಾಂಬೆ ದೇವಾಲಯ ಕೂಡ ಇಂದಿನಿಂದ ತೆರೆಯಲಿದೆ. ಈ ಸಂಬಂಧ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ, ಶೃಂಗೇರಿ ಶಾರದಾಂಬೆ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು,ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಹಾಗೂ ಸಂಜೆ 5ರಿಂದ 8 ಗಂಟೆಯವರಗೆ ಮಾತ್ರ ದೇವಾಲಯ ತೆರೆಯಲಿದೆ. ಇನ್ನೂ, ದೇವಾಲಯದೊಳಗೆ ಒಂದು ಬಾರಿಗೆ 25 ಭಕ್ತರಿಗೆ ಮಾತ್ರ ಪ್ರವೇಶವಿರಲಿದೆ. ಸಾಮಾಜಿಕಅಂತರ ಕಾಪಾಡಬೇಕು,ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ಕೆಲವು ಷರತ್ತು ಹಾಕಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 