ಭಕ್ತರಿಗೆ ಇಂದಿನಿಂದ ಶೃಂಗೇರಿ ಶಾರದಾಂಬೆ ದರ್ಶನಭಾಗ್ಯ ....!!
ಬೆಂಗಳೂರು , ಜೂನ್ 8, ರಾಜ್ಯದಲ್ಲಿ ಭಕ್ತರಪಾಲಿಗೆ ಇಂದಿನಿಂದ ದೇವ -ದೇವತೆಗಳ ದರ್ಶನ ಭಾಗ್ಯ ...!ಅಂತೆಯೇ ಶೃಂಗೇರಿ ಶಾರದಾಂಬೆ ದೇವಾಲಯ ಕೂಡ ಇಂದಿನಿಂದ ಭಕ್ತರ ಪಾಲಿಗೆ ತೆರೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯದ ಅನೇಕ ದೇವಾಲಯಗಳು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ದೇವಾಲಯಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಂತೆಯೇ ಶೃಂಗೇರಿ ಶಾರದಾಂಬೆ ದೇವಾಲಯ ಕೂಡ ಇಂದಿನಿಂದ ತೆರೆಯಲಿದೆ. ಈ ಸಂಬಂಧ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ, ಶೃಂಗೇರಿ ಶಾರದಾಂಬೆ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಲಿದ್ದು,ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಹಾಗೂ ಸಂಜೆ 5ರಿಂದ 8 ಗಂಟೆಯವರಗೆ ಮಾತ್ರ ದೇವಾಲಯ ತೆರೆಯಲಿದೆ. ಇನ್ನೂ, ದೇವಾಲಯದೊಳಗೆ ಒಂದು ಬಾರಿಗೆ 25 ಭಕ್ತರಿಗೆ ಮಾತ್ರ ಪ್ರವೇಶವಿರಲಿದೆ. ಸಾಮಾಜಿಕಅಂತರ ಕಾಪಾಡಬೇಕು,ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ಕೆಲವು ಷರತ್ತು ಹಾಕಲಾಗಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 