72 ಲಕ್ಷ ವೆಚ್ಚದಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ
Srinivasa Mane performs Bhoomi Pooja for the House to House Ganga Project at a cost of Rs. 72 lakhs
ಲೋಕದರ್ಶನ ವರದಿ
72 ಲಕ್ಷ ವೆಚ್ಚದಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿಗೆ ಶ್ರೀನಿವಾಸ ಮಾನೆ ಭೂಮಿಪೂಜೆ
ಹಾನಗಲ್ 15 :ತಾಲೂಕಿನ ಆಡೂರು ಗ್ರಾಮದಲ್ಲಿ ? 72 ಲಕ್ಷ ವೆಚ್ಚದಲ್ಲಿ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ತಾಲೂಕಿನ ಬಹುತೇಕ ಗ್ರಾಪಂ ವ್ಯಾಪ್ತಿಗಳಲ್ಲಿ ಮಹತ್ವಾಕಾಂಕ್ಷೆಯ ಮನೆ, ಮನೆಗೆ ಗಂಗೆ ಯೋಜನೆ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಕೂಡಲ ಬಹುಗ್ರಾಮ ನದಿ ನೀರು ಸರಬರಾಜು ಯೋಜನೆ ಶೀಘ್ರ ಚಾಲನೆ ಪಡೆಯಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಕ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಲಾಗಿದೆ. ನೀರಾವರಿ ಯೋಜನೆಗಳ ಮೂಲಕ ಕೆರೆ, ಕಟ್ಟೆಗಳಿಗೆ ಸಮರ್ಕವಾಗಿ ನೀರು ಪೂರೈಸಿ ಅಂತರ್ಜಲ ಮಟ್ಟದ ಸುಧಾರಣೆಗೆ ಚಿತ್ತ ನೆಡಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ ಶಾಸಕ ಶ್ರೀನಿವಾಸ ಮಾನೆ, ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.ಗ್ರಾಪಂ ಅಧ್ಯಕ್ಷ ಮಾತಾಂರ್ಡಪ್ಪ ಬಾರ್ಕಿ, ತಾಪಂ ಮಾಜಿ ಅಧ್ಯಕ್ಷ ಶಿವಬಸಪ್ಪ ಪೂಜಾರ, ಗ್ರಾಪಂ ಮಾಜಿ ಅಧ್ಯಕ್ಷ ನಾಗಪ್ಪ ಪೋಲೇಶಿ, ಪ್ರಮುಖರಾದ ಭರಮಣ್ಣ ಶಿವೂರ, ಬಾಬು ನಿಕ್ಕಂ, ಬಾಬುಲಾಲ್ ನಾಯ್ಕರ, ಶರಣ ಬಳಿಗಾರ ಮೈಲಾರಿ ಬಾರ್ಕಿ, ಸಂತೋಷ ಹೋತನಹಳ್ಳಿ, ಅನ್ವರಸಾಬ ಸುರಳೇಶ್ವರ, ಶೇಕಪ್ಪ ಸಂಗೂರ, ಶಬ್ಬೀರ್, ಪ್ರಕಾಶ ಹುಲಗೂರ, ಸಲೀಂ ಪೀರಜಾದೆ, ಬಸವರಾಜ ಡುಮ್ಮನವರ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 