ಇದೇ 25ರಿಂದ ಕಿರುತೆರೆ ಧಾರಾವಾಹಿ ಚಿತ್ರೀಕರಣ ಆರಂಭ : ಕೆಟಿವಿಎ
ಬೆಂಗಳೂರು, ಮೇ 07,ಕೊರೋನಾ ಪ್ರಕರಣಗಳು ರಾಜ್ಯ ಹಾಗೂ ದೇಶವನ್ನು ತಲ್ಲಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ನಿಯಂತ್ರಿಸಲು ಕಿರುತೆರೆ ಧಾರಾವಾಹಿಗಳ ಚಿತ್ರೀಕರಣ ನಿಷೇಧಿಸಲಾಗಿತ್ತು. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ –ಕೆಟಿವಿದೆ ಮನವಿಯ ಮೇರೆಗೆ ಎರಡು ದಿನಗಳ ಹಿಂದಷ್ಟೇ ಧಾರಾವಾಹಿಗಳ ಷರತ್ತುಬದ್ಧ ಒಳಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ.ಅನುಮತಿಗಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, , ಕಂದಾಯ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಆರ್. ಅಶೋಕ ಅವರಿಗೆ ಧನ್ಯವಾದ ಸಲ್ಲಿಸಿರುವ ಕೆಟಿವಿಎ, ಇದೇ 25 ರಿಂದ ಚಿತ್ರೀಕರಣ ಆರಂಭಿಸಲು ನಿರ್ಧರಿಸಿದೆ. ಅರ್ಧದಲ್ಲೇ ನಿಂತಿರುವ ಧಾರಾವಾಹಿಗಳ ಚಿತ್ರೀಕರಣವನ್ನು ಇಂದಿನ ಸ್ಥಿತಿಗತಿಗೆ ಅನುಗುಣವಾಗಿ ಅಳವಡಿಸಿಕೊಂಡು ಚಿತ್ರೀಕರಿಸುವ ಸಲುವಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಟಿವಿಎ ಅಧ್ಯಕ್ಷ ಎಸ್. ವಿ. ಶಿವಕುಮಾರ್, ಹಾಗೂ ಕಾರ್ಯದರ್ಶಿ ಡಿ.ಸಿ. ವೀರೇಂದ್ರ ಬೆಳ್ಳಿಚುಕ್ಕಿ ಹೇಳಿಕೆ ನೀಡಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 