ರಾಜ್ಯ ಬಿಜೆಪಿಯಲ್ಲಿ ತಂದೆ, ಮಗನ ಕಿತ್ತೊಗೆಯಬೇಕು: ಯತ್ನಾಳ್
State BJP should remove father and son: Yatnal
ನವದೆಹಲಿ 04: ರಾಜ್ಯ ಬಿಜೆಪಿಯಲ್ಲಿ ಚಾಲ್ತಿಯಲ್ಲಿರುವ ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ವಂಶಾಡಳಿತ ರಾಜಕೀಯದ ಕುರಿತು ಪಕ್ಷದ ನಾಯಕತ್ವಕ್ಕೆ ವಿವರವಾಗಿ ವಿವರಿಸಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ಬಿಜೆಪಿಯಿಂದ ಶೋಕಾಸ್ ನೋಟಿಸ್ ಸಂಬಂಧ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಕೇಂದ್ರ ಶಿಸ್ತು ಸಮಿತಿ (ಸಿಡಿಸಿ) ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರಿಗೆ ಆರು ಪುಟಗಳ ಉತ್ತರವನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಉತ್ತರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಆಂಧ್ರಪ್ರದೇಶಗಳು ಈಗ ಹಿಂದುತ್ವದತ್ತ ವಾಲುತ್ತಿರುವ ಕಾರಣ ನಮ್ಮ ಪಕ್ಷವು ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣದ ಕಪಿಮುಷ್ಠಿಯಿಂದ ಹೊರಬರಬೇಕು. ಅಲ್ಲದೆ ಹಿಂದುತ್ವದ ಪರ ಧ್ವನಿ ಗಟ್ಟಿಯಾಗಬೇಕು ಎಂದು ತಮ್ಮ ಪತ್ರದಲ್ಲಿ ಬರೆದಿರುವುದಾಗಿ ಹೇಳಿದರು.
ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧದ ಗಂಭೀರ ಪ್ರಕರಣಗಳು ಮತ್ತು ಹೊಂದಾಣಿಕೆ ರಾಜಕೀಯವನ್ನು ನಾನು ವಿವರಿಸಿದ್ದೇನೆ. ಯಡಿಯೂರಪ್ಪ ಕುಟುಂಬದ ಬಗ್ಗೆ ಅಸಮಾಧಾನ ಹೊಂದಿರುವ ಅನೇಕ ತಟಸ್ಥ ನಾಯಕರಿದ್ದಾರೆ. ಆದರೆ ಆಂತರಿಕ ಶಿಸ್ತಿನ ಕಾರಣದಿಂದ ಮಾಜಿ ಸಿಎಂ ವಿರುದ್ಧ ಯಾರೂ ಮಾತನಾಡುತ್ತಿಲ್ಲ ಎಂದು ಯತ್ನಾಳ್ ಹೇಳಿದರು.
ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ, ವಿಶೇಷವಾಗಿ ಬಿಎಸ್ವೈ ಪುತ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ನ 'ವಂಶದ ರಾಜಕೀಯ' ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಬಿಜೆಪಿ ಕೇಂದ್ರ ನಾಯಕತ್ವವು ಯಡಿಯೂರಪ್ಪ ಅವರ 'ವಂಶ ರಾಜಕೀಯ'ವನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿರುವುದಾಗಿ ಹೇಳಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 