ಬೆಂಗಳೂರು 17: 2025-26ನೇ ಸಾಲಿನ ಬಜೆಟ್ ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.
ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು.