ರಾಜ್ಯ ರೈತ ಸಂಘ, ಹಸಿರು ಸೇನೆ ಬೆಳಗಾವಿ ಜಿಲ್ಲಾ ಸಮಿತಿ ವಿಸರ್ಜನೆ: ಕೋಡಿಹಳ್ಳಿ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿದ
ಘಟಪ್ರಭಾ 02: ಕನರ್ಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬೆಳಗಾವಿ ಜಿಲ್ಲಾ ಸಮಿತಿಯನ್ನು ಸದ್ಯಕ್ಕೆ ವಿಸರ್ಜನೆ ಮಾಡಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಹೇಳಿದರು.
ಅವರು ಶನಿವಾರದಂದು ಸಮೀಪದ ಧುಪದಾಳ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಕನರ್ಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರೈತ ಸಂಘದ ತತ್ವಸಿದ್ಧಾಂತಗಳಿಗೆ ಅನುಸಾರವಾಗಿ ಮತ್ತು ಸಂಘಟನೆಯ ಪದಾಧಿಕಾರಿಗಳಲ್ಲಿ ಭಿನ್ನಾಭಿಪ್ರಾಯ ಇರುವುದರಿಂದ ಈ ನಿರ್ಣಯ ತಗೆದುಕೊಳ್ಳಲಾಗಿದೆ. ಹಸಿರು ಸೇನೆ ಜಿಲ್ಲಾಧ್ಯಕ್ಷ ಗಣಪತಿ ಈಳಿಗೇರ ಹಾಗೂ ರೈತ ಸಂಘದ ಜಿಲ್ಲಾ ಕಾಯರ್ಾಧ್ಯಕ್ಷ ಭೀಮಶಿ ಗದಾಡಿ ಅವರನ್ನು ಒಳಗೊಂಡಂತೆ ಜಿಲ್ಲಾ ಸಮಿತಿಯ ಎಲ್ಲ ಪದಾಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಸದ್ಯಕ್ಕೆ ಎಲ್ಲರೂ ರೈತ ಸಂಘದ ಕಾರ್ಯಕರ್ತರಾಗಿ ಸೇವೆ ಸಲ್ಲಿಸಬೇಕು. ಅಲ್ಲದೇ ರಾಘವೇಂದ್ರ ನಾಯಿಕ ಅವರನ್ನು ತಾತ್ಕಾಲಿಕವಾಗಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ರೈತ ಸಂಘದ ರಾಜ್ಯ ಸಂಚಾಲಕ ಚೂನಪ್ಪ ಪೂಜೇರಿ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ರೈತ ಸಂಘದಿಂದ ಅರಭಾವಿ ವಿಧಾನ ಸಭಾ ಮತಕ್ಷೇತ್ರದಿಂದ ಚುನಾವಣೆಗೆ ಸ್ಪಧರ್ಿಸಿದ್ದರು. ಈ ಸಂದರ್ಭದಲ್ಲಿ ಈ ನಾಯಕರು ಅವರಿಗೆ ಬೆಂಬಲ ನೀಡದೇ ಬೇರೆ ಪಕ್ಷದ ಅಭ್ಯಥರ್ಿ ಪರ ಪ್ರಚಾರದಲ್ಲಿ ತೊಡಗಿದ್ದರು. ಈ ವಿಷಯವಾಗಿ ಈ ನಾಯಕರ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿತ್ತು. ಇಂದು ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷರ ಮುಂದೆ ವಿಷಯ ಪ್ರಸ್ತಾಪಿಸಿದಾಗ ಸಭೆಯಲ್ಲಿ ಈ ನಿರ್ಣಯ ತಗೆದುಕೊಳ್ಳಲಾಯಿತು.
ಜುಲೈ 15ರಂದು ರೈತ ಹುತಾತ್ಮ ದಿನಾಚರಣೆಯನ್ನು ಹಾವೇರಿಯಲ್ಲಿ ಮಾಡುವುದಾಗಿ ರಾಜ್ಯಾಧ್ಯಕ್ಷರು ತಿಳಿಸಿದರು. ಈ ಹಿಂದೆ ರೈತ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಬಸವರಾಜ ಮಳಲಿ ಮತ್ತು ಪಾಮಲದಿನ್ನಿ ಗ್ರಾಮದ ರೈತ ಮುಖಂಡ ಭೀರಪ್ಪ ಪೂಜೇರಿ ಅವರು ನಿಧನ ಹೊಂದಿದ್ದು ಅವರ ಮೂತರ್ಿ ಪ್ರತಿಷ್ಠಾಪನೆಯನ್ನು ಶೀಘ್ರದಲ್ಲಿ ಮಾಡಲಾಗುವುದು. ಅದಕ್ಕೆ ಎಲ್ಲ ರೈತ ಸಂಘದ ಕಾರ್ಯಕರ್ತರು ಸಹಾಯ ಸಹಕಾರ ನೀಡಬೇಕೆಂದು ರೈತ ಮುಖಂಡರು ಸಭೆಯಲ್ಲಿ ವಿವಿಧ ತಾಲೂಕಿನ ರೈತ ಮುಖಂಡರು ತಿಳಿಸಿದರು. ಜಿಲ್ಲೆಯ 10 ತಾಲೂಕಿನಿಂದ ರೈತ ಸಂಘದ ನೂರಾರು ತಾಲೂಕಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 