ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
State Farmers Union, Hasiru Sena protest demanding various demands
ಬೆಳಗಾವಿ 09: ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ಸುವರ್ಣ ಸೌಧದ ಬಳಿಯ ಸುವರ್ಣ ಗಾರ್ಡನ್ ಟೆಂಟ್ನಲ್ಲಿ ಸರ್ಕಾರದ ವಿರುದ್ಧ ನೂರಾರು ರೈತರು ಘೋಷಣೆ ಕೂಗಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ ಪಡೆಯಬೇಕು. ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿ ಪಡಿಸಬೇಕು. ವಿದ್ಯುತ್ ಪರಿಕರಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ಕಬ್ಬಿಗೆ ಪ್ರತಿ ಟನ್ಗೆ 3,500 ನಿಗದಿ ಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕರಾಳ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು. ರಾಜ್ಯದ ನೀರಾವರಿ ಯೋಜನೆಗಳಾದ ಮಾದಾಯಿ, ಕಳಸಾ ಬಂಡೂರಿ, ಕೃಷ್ಣ, ತುಂಗಭದ್ರಾ ನದಿಗೆ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಚಾಮರಾಜ ನಗರ ಜಿಲ್ಲೆ ಹಾಗೂ ಗುಂಡ್ಲ ಪೇಟೆ ತಾಲೂಕಿನ ಗಾಂಧಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಬೇಕು ಜೊತೆಗೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟಿಸಲಾಯಿತು.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 