ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
State Farmers Union, Hasiru Sena protest demanding various demands
ಬೆಳಗಾವಿ 09: ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ಸುವರ್ಣ ಸೌಧದ ಬಳಿಯ ಸುವರ್ಣ ಗಾರ್ಡನ್ ಟೆಂಟ್ನಲ್ಲಿ ಸರ್ಕಾರದ ವಿರುದ್ಧ ನೂರಾರು ರೈತರು ಘೋಷಣೆ ಕೂಗಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ ಪಡೆಯಬೇಕು. ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿ ಪಡಿಸಬೇಕು. ವಿದ್ಯುತ್ ಪರಿಕರಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ಕಬ್ಬಿಗೆ ಪ್ರತಿ ಟನ್ಗೆ 3,500 ನಿಗದಿ ಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕರಾಳ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು. ರಾಜ್ಯದ ನೀರಾವರಿ ಯೋಜನೆಗಳಾದ ಮಾದಾಯಿ, ಕಳಸಾ ಬಂಡೂರಿ, ಕೃಷ್ಣ, ತುಂಗಭದ್ರಾ ನದಿಗೆ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಚಾಮರಾಜ ನಗರ ಜಿಲ್ಲೆ ಹಾಗೂ ಗುಂಡ್ಲ ಪೇಟೆ ತಾಲೂಕಿನ ಗಾಂಧಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಬೇಕು ಜೊತೆಗೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 