ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
State Farmers Union, Hasiru Sena protest demanding various demands
ಬೆಳಗಾವಿ 09: ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ಸುವರ್ಣ ಸೌಧದ ಬಳಿಯ ಸುವರ್ಣ ಗಾರ್ಡನ್ ಟೆಂಟ್ನಲ್ಲಿ ಸರ್ಕಾರದ ವಿರುದ್ಧ ನೂರಾರು ರೈತರು ಘೋಷಣೆ ಕೂಗಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ ಪಡೆಯಬೇಕು. ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿ ಪಡಿಸಬೇಕು. ವಿದ್ಯುತ್ ಪರಿಕರಗಳನ್ನು ಉಚಿತವಾಗಿ ವಿತರಿಸುತ್ತಿದ್ದು ಅದನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ಕಬ್ಬಿಗೆ ಪ್ರತಿ ಟನ್ಗೆ 3,500 ನಿಗದಿ ಪಡಿಸಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕರಾಳ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು. ರಾಜ್ಯದ ನೀರಾವರಿ ಯೋಜನೆಗಳಾದ ಮಾದಾಯಿ, ಕಳಸಾ ಬಂಡೂರಿ, ಕೃಷ್ಣ, ತುಂಗಭದ್ರಾ ನದಿಗೆ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಚಾಮರಾಜ ನಗರ ಜಿಲ್ಲೆ ಹಾಗೂ ಗುಂಡ್ಲ ಪೇಟೆ ತಾಲೂಕಿನ ಗಾಂಧಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಬೇಕು ಜೊತೆಗೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟಿಸಲಾಯಿತು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 