ಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿ
State Level Award for Children's Literary Works
ಸಿಂದಗಿ 07: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ವಿದ್ಯಾಚೇತನ ಪ್ರಕಾಶನದಿಂದ ಕೊಡಮಾಡುವ ರಾಜ್ಯ ಮಟ್ಟದ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿಗೆ ವಿವಿಧ ಮಕ್ಕಳ ಸಾಹಿತ್ಯ ಕೃತಿಗಳು ಆಯ್ಕೆಯಾಗಿವೆ. ಬೆಂಗಳೂರಿನ ವಸು ವತ್ಸಲಾ ಅವರ ‘ಅಂತರಿಕ್ಷದಲ್ಲಿ ವಿಹಾ’ ಕಥಾಸಂಕಲನ, ತುಮಕೂರಿನ ನಾಗಭೂಷಣ ಅವರ ‘ಮಿನುಗುವ ಮನುಷ್ಯ’ ಕಾದಂಬರಿ, ಬೀಳಗಿಯ ಸೋಮಲಿಂಗ ಬೇಡರ ಅವರ ‘ಬಾರೆಚುಕ್ಕಿ ಬೆಳ್ಳಿಚುಕ್ಕಿ’ ಕವನ ಸಂಕಲನ ಮತ್ತು 18 ವರ್ಷದ ಒಳಗಿನ ಮಕ್ಕಳು ಬರೆದ ಕೃತಿಗಳಿಗೆ ಇರುವ ಚಿಗುರು ಪ್ರಶಸ್ತಿಗೆ ಆಲಮೇಲದ ನವ್ಯ ಕತ್ತಿ ಅವರ ‘ಮಾಯಾ ಗುಹೆ’ ಕಥಾ ಸಂಕಲನ ಮತ್ತು ಸಿದ್ದಾಪುರದ ಎಚ್. ವಿಧಾತ್ರೀ ಅವರ ‘ನಕ್ಷತ್ರ ಪಟಲ’ ಕವನ ಸಂಕಲನ ಆಯ್ಕೆ ಆಗಿರುತ್ತವೆ.
ಜುಲೈ 13ರಂದು ಸಿಂದಗಿಯ ಸಾರಂಗಮಠದಲ್ಲಿ ಜರುಗುವ ಸಮಾರಂಭದಲ್ಲಿ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವಿದ್ಯಾಚೇತನ ಪ್ರಕಾಶನ ಹ.ಮ. ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 