ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನದ ಕಣಜಗಳಾಗಿವೆ: ಡಾ. ರಾಯ್ಕರ
ಸಂಧಿ ವಿವೇಕ 2025" ರಾಜ್ಯಮಟ್ಟದ ಆಯುರ್ವೇದ ಸಮ್ಮೇಳನ ಕಾರ್ಯಕ್ರಮ
ಚಿಕ್ಕೋಡಿ 05: ಸಂಧಿವಾತ ಮತ್ತು ಕೀಲು ಸಂಬಂಧಿ ಕಾಯಿಲೆಗಳ ಆಧುನಿಕ ಮತ್ತು ಆಯುರ್ವೇದ ನಿರ್ವಹಣೆಯ ಕುರಿತು ಇಂದಿನ ಯುವ ವೈದ್ಯರಿಗೆ ಅರಿತುಕೊಳ್ಳಲು ವಿಚಾರ ಸಂಕಿರಣ ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನದ ಕಣಜಗಳಾಗಿವೆ. ಇವುಗಳ ಸದುಪಯೋಗ ಪಡೆದುಕೊಳ್ಳುವದು ಯುವ ವೈದ್ಯರ ಜವಾಬ್ದಾರಿಯಾಗಿವೆ ಎಂದು ಕೆ ಎಲ್ ಇ ಆಸ್ಪತ್ರೆಯ ಎಲಬು ಕೀಲು ತಜ್ಞರಾದ ಡಾ ಅಭಿಷೇಕ ರಾಯ್ಕರ ಅವರು ಹೇಳಿದರು.
ಅವರು ದಿ. 5ನೇ ಜುಲೈ 2025 ರಂದು ಚಿಕ್ಕೋಡಿ ಕೆ ಎಲ್ ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ "ಸಂಧಿ ವಿವೇಕ 2025" ರಾಜ್ಯಮಟ್ಟದ ಆಯುರ್ವೇದ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದರು.
ಕಾಲೇಜಿನ ಪ್ರಾಚಾರ್ಯರು ಹಾಗೂ ವೈದ್ಯಕೀಯ ನಿರ್ದೇಶಕರಾದ ಡಾ.ಕಿರಣಕುಮಾರ ಮುತ್ನಾಳಿ ಮಾತನಾಡುತ್ತಾ ಈ ಸಮ್ಮೇಳನವು ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಬಿ.ಕೋರೆ ಅವರ ಮುಂದಾಳತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಂಧಿವಾತ ಮುಂತಾದ ಕಾಯಿಲೆಗಳಲ್ಲಿ ಆಯುರ್ವೇದದ ಪ್ರಾಮುಖ್ಯತೆ ಮತ್ತು ಸಮಗ್ರ ಚಿಕಿತ್ಸಾ ದೃಷ್ಟಿಕೋನದ ಅಗತ್ಯತೆಯ ಶ್ರೇುುಷ್ಠ ವೇದಿಕೆಯಾಗಿದೆ ಎಂದು ಹೇಳಿದರು.
ಸಂಧಿವಾತದ ರೋಗಗಳ ನಿರ್ವಹಣೆಯ ಕುರಿತು ವಿಚಾರ ಸಂಕಿರಣ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬೆಳಗಾವಿಯ ಡಾ.ಅರ್ಚನಾ ಉಪ್ಪಿನ್, (ಜನರಲ್ ಮೆಡಿಸಿನ್), ಪಿಡಿಸಿಸಿ (ರೆಮಟೋಲಾಜಿ), ಅವರು ಸಂಧಿವಾತದ ಆಧುನಿಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದರು.
ಡಾ. ಸಚೀನ ಖಟಕಲ್ಲೆ, ರೇಡಿಯಾಲಜಿಸ್ಟ್, ಅವರು ಸಂಧಿ ಸಂಬಂಧಿ ಕಾಯಿಲೆಗಳ ಚಿತ್ರಣದ ಬಗ್ಗೆ ಉಪನ್ಯಾಸ ನೀಡಿದರು ಾ. ಶ್ರೀಹರಿ ಟಾಕಿಲ್ಕರ್, ಮ್ಯಾನೇಜರ್, ಫೈಟೋ ಫಾರ್ಮಾ ಅವರು ಸಂಧಿವಾತದ ಚಿಕಿತ್ಸೆಗೆ ರಸ ಓಷಧಿಗಳ ತಯಾರಿ ಕುರಿತು ವಿವರಿಸಿದರು ುಶವಂತ ಆಯುರ್ವೇದ ಕಾಲೇಜು, ಕೊಡೋಲಿಯ ಡಾ. ರವಿ ಪಾಟೀಲ್, ಪಂಚಕರ್ಮದಲ್ಲಿ ಸಂಧಿವಾತದ ಚಿಕಿತ್ಸಾ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸಚಿನ ಗಣೇಶವಾಡಿ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಹಕಾರದಿಂದ ಈ ಸಮ್ಮೇಳನವು ಯಶಸ್ವಿಯಾಗಿ ನಡೆಯಿತು. ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಆಯುರ್ವೇದ ಮಹಾವಿದ್ಯಾಲಯಗಳಿಂದ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಡಿಯೋ ಮೂಲಕ ನೇರ ಪ್ರಸಾರ ಮಾಡಲಾಯಿತು. ಅಧ್ಯಾಪಕರು ಮತ್ತು ವೈದ್ಯರು ಭಾಗವಹಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ವಿಶಾಲ ಅವರು ನಿರೂಪಿಸಿದರು. ವೈಷ್ಣವಿ ಸ್ವಾಗತಿಸಿದರು, ಸೌಮ್ಯಾ ವಂದಿಸಿದರು. ಕಾರ್ಯಕ್ರಮದಲ್ಲಿ ಪೋಸ್ಟರ್ ಸ್ಪರ್ಧೆಯಲ್ಲಿ ವಿವಿಧ ಆಯುರ್ವೇದ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 