ರಾಜ್ಯ ಸಿಲತ್ ಚಾಂಪಿಯನ್ಶಿಪ್: ಗೊಂಡಬಾಳ ಸಹೋದರಿಯರಿಗೆ ಪ್ರಶಸ್ತಿ
State Silat Championship: Gondabal sisters win award
ಕೊಪ್ಪಳ 30: ಜಿಲ್ಲೆಯ ಕುಷ್ಟಗಿ ತಾಲೂಕು ಹನುಮಸಾಗರದ ಅಭಿನವ ತಿರುಪತಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜರುಗಿದ 11ನೇ ರಾಜ್ಯ ಪೆಂಚಾಕ್ ಸಿಲತ್ ಚಾಂಪಿಯನ್ಶಿಪ್ನಲ್ಲಿ ಕೊಪ್ಪಳದ ಗೊಂಡಬಾಳ ಸಹೋದರಿಯರು ತಲಾ ಎರಡು ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದಾರೆ.
ಇಲ್ಲಿನ ಚೈತನ್ಯ ಗ್ರೂಪ್ನ ಸ್ವಾಮಿ ವಿವೇಕಾನಂದ ವಿಜ್ಞಾನ ಕಾಲೇಜಿನ ದ್ವೀತಿಯ ಪಿಯು ವಿದ್ಯಾರ್ಥಿನಿ ಕು. ಸಾಹಿತ್ಯ ಎಂ. ಗೊಂಡಬಾಳ ಅವರು ಜೂನಿಯರ್ ವಿಭಾಗದ (63-67 ಕೆಜಿ) ಲ್ಲಿ ಟ್ಯಾಂಡಿಂಗ್ (ಫೈಟಿಂಗ್) ಮೊದಲ ಸ್ಥಾನ ಗೋಲ್ಡ್ ಮತ್ತು ಜೂನಿಯರ್ ವಿಭಾಗದ ತುಂಗಲ್ ನಲ್ಲಿ ಕಂಚಿನ ಪದಕ ಪಡೆದಿದ್ದರೆ, ಭಾಗ್ಯನಗರದ ಪಯೋನಿಯರ್ ಪಬ್ಲಿಕ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಕು. ಅಕ್ಷರ ಎಂ. ಗೊಂಡಬಾಳ ಅವರು ಪ್ರಿ-ಟೀನ್ (54-56 ಕೆಜಿ) ವಿಭಾಗದಲ್ಲಿ ಟ್ಯಾಂಡಿಂಗ್ (ಫೈಟಿಂಗ್) ಮೊದಲ ಸ್ಥಾನ ಗೋಲ್ಡ್ ಮತ್ತು ಜೂನಿಯರ್ ವಿಭಾಗದ ತುಂಗಲ್ ನಲ್ಲಿ ಮೊದಲ ಸ್ಥಾನ ಗೋಲ್ಡ್ ಪಡೆದು ಜುಲೈ 19-20 ರಂದು ತಮಿಳುನಾಡಿನ ಚನೈನಲ್ಲಿ ನಡೆಯುವ ರಾಷ್ಟ್ರೀಯ ಸೌತ್ ಝೇನ್ ಚಾಂಪಿಯನ್ಶಿಪ್ ಗೇ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ರಾಷ್ಟ್ರ ಪೆಂಚಾಕ್ ಸಿಲತ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್ ಟೈಲರ್, ರಾಜ್ಯ ಪೆಂಚಾಕ್ ಸಿಲತ್ ಕಾರ್ಯದರ್ಶಿ ವಿಜಯಕುಮಾರ ಹಂಚಿನಾಳ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ಮಂಜುನಾಥ ಜಿ. ಗೊಂಡಬಾಳ, ಮಣಿಪುರ ರಾಜ್ಯ ಹಿರಿಯ ತರಬೇತುದಾರ ಗೊಯಿನೊ, ಜಿಲ್ಲಾ ಕಾರ್ಯದರ್ಶಿ ಈರಣ್ಣ ಬಾದಾಮಿ, ಕೋಚ್ ಆಕಾಶ್ ದೊಡ್ಡವಾಡ ಮತ್ತು ಮಹ್ಮದ್ ಅಜರುದ್ದಿನ್, ಜಂಪ್ ರೋಪ್ ಅಸೋಸಿಯೇಷನ್ ಹಿರಿಯ ಉಪಾಧ್ಯಕ್ಷೆ ರೇಣುಕಾ ಪುರದ ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 