ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ನೃತ್ಯ ಸ್ಪರ್ಧೆ
State-level folk and Kannada song dance competition for government employees
ಸವದತ್ತಿ 29 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ರಾಜ್ಯಮಟ್ಟದ ಜನಪದ, ಕನ್ನಡ ಗೀತೆಗಳ ಗುಂಪು ನೃತ್ಯ ಸ್ಪರ್ಧೆಗಳನ್ನು ನವೆಂಬರ್ 8ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ಸಂಘದ ಆವರಣದಲ್ಲಿ ಏರಿ್ಡಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲು, ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಖಾಯಂ ನೌಕರರು ಸಂಘವು ನೀಡಿರುವ ವೆಬ್ ಸೈಟ್ ನಲ್ಲಿ ನವಂಬರ್ 2ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ನಂತರ ನೊಂದಣಿಗೆ ಅವಕಾಶವಿಲ್ಲ. ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 1ಲಕ್ಷ , ದ್ವಿತೀಯ ಬಹುಮಾನ 75 ಸಾವಿರ, ತೃತೀಯ ಬಹುಮಾನ ರೂ.50ಸಾವಿರ ಹಾಗೂ ಸಮಾಧಾನಕರ ಬಹುಮಾನ ರೂ.20 ಸಾವಿರ, ನಗದು ಬಹುಮಾನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಸಂಘದ ಗೌರವಾಧ್ಯಕ್ಷ ಎಸ್ ಬಸವರಾಜು ಅವರ 8660236843 ಸಂಖ್ಯೆಗೆ ಸಂಪರ್ಕಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಹಾಗೂ ಸವದತ್ತಿ ತಾಲೂಕು ಅಧ್ಯಕ್ಷರಾದ ಅಶೋಕ ಮುರಗೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 