ಜೂನ್ 01 ರಿಂದ ರಾಜ್ಯಮಟ್ಟದ ಸೈದ್ಧಾಂತಿಕ ಅಧ್ಯಯನ ಶಿಬಿರ

State-level theoretical study camp from June 01

ಹಾವೇರಿ: ಶಾಂತಿ, ಸೌಹಾರ್ದತೆ, ಐಕ್ಯತೆಗಾಗಿ, ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ, ಸಾರ್ವಜನಿಕ ಶಿಕ್ಷಣ ಬಲಪಡಿಸಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿಯು ರಾಮನಗರದ ಜನಪದ ಲೋಕದ ದೊಡ್ಡಮನೆಯ ಸಭಾಂಗಣದಲ್ಲಿ ಆಯೋಜಿಸಿದ ರಾಜ್ಯ ಅದ್ಯಯನ ಶಿಬಿರಕ್ಕೆ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಪ್ರತಿನಿಧಿಗಳು ಪ್ರಯಾಣ ಬೆಳೆಸಿದರು.  

ಶಿಕ್ಷಣದ ಹಕ್ಕುಗಳ ಪರವಾಗಿ ಮಾತನಾಡುವ ಉಪನ್ಯಾಸಕರನ್ನು ಹಾಗೂ ಪ್ರಶ್ನೆ ಮಾಡುವ ವಿದ್ಯಾರ್ಥಿಗಳ ಮೇಲೆ ಹಿಂಸಾತ್ಮಕ ದಾಳಿಗಳನ್ನು ನಡೆಸಲಾಗುತ್ತಿದೆ. ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ಈ ಎಲ್ಲಾ ದಾಳಿಗಳನ್ನು ಹಿಮ್ಮೆಟ್ಟಿಸಲು ಹಾಗೂ ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಲು ಮತ್ತು ವಿದ್ಯಾರ್ಥಿಗಳಲ್ಲಿ ’ಶಾಂತಿ, ಸೌಹಾರ್ದತೆ, ಐಕ್ಯತೆಗಾಗಿ ಹಾಗೂ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ, ಸಾರ್ವಜನಿಕ ಶಿಕ್ಷಣ ಬಲಪಡಿಸಲು ಆಗ್ರಹಿಸಿ" ವಿದ್ಯಾರ್ಥಿ ಚಳವಳಿಯನ್ನು ಬಲಿಷ್ಠಗೊಳಿಸಲು ರಾಮನಗರ ಜಿಲ್ಲೆಯ ಜಾನಪದ ಲೋಕದ ದೊಡ್ಡಮನಿ, ಮಂಟಪ ಸಭಾಂಗಣದಲ್ಲಿ ದಿನಾಂಕ: 2025 ಮೇ 29, 30, 31 ಮತ್ತು ಜೂನ್ 01 ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯಮಟ್ಟದ ಸೈದ್ಧಾಂತಿಕ ಅಧ್ಯಯನ ಶಿಬಿರ ನಡೆಸಲಾಗುತ್ತಿದೆ.  

ಶಿಬಿರವನ್ನು ಡಾ. ಪುರುಷೋತ್ತಮ ಬಿಳಿಮಲೆ ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಧಿಕಾರ ಇವರು ಉದ್ಘಾಟಿಸಲಿದ್ದು, ಶಿಬಿರದ ಸಮಾರೋಪಕ್ಕೆ ಮುಖ್ಯ ಅತಿಥಿಗಳಾಗಿ ಡಾ.ಅಶೋಕ, ಹಿರಿಯ ಸಿನಿಮಾ ನಟರು ಬೆಂಗಳೂರು ಭಾಗಿಯಾಗಲಿದ್ದಾರೆ. ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿ ಮುಖಂಡರು, ಶಿಬಿರಾರ್ಥಿಗಳು ಭಾಗಿಯಾಗಲಿದ್ದಾರೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷರು ಬಸವರಾಜ ಎಸ್ ತಿಳಿಸಿದರು. ಎಸ್‌ಎಫ್‌ಐ ಮುಖಂಡರಾದ ಕೃಷ್ಣ ನಾಯಕ, ಮಹೇಶ್ ಮರೋಳ, ವಸಂತ ವಡ್ಡರ, ಸುನೀಲ್ ಲಮಾಣಿ, ಈರ​‍್ಪ ಹರಿಜನ, ಅರುಣ ಕುಮಾರ ನಗವತ್, ಮಂಜುನಾಥ ಕೋಡಿಹಳ್ಳಿ, ಬಾಲ ಸಂಘಂನ ಧನುಷ್ ದೊಡ್ಡಮನಿ ಭಾಗವಹಿಸಿದರು.