ಪ್ರಧಾನಿ ಮೋದಿಯ ವಿಶೇಷ ಪ್ಯಾಕೇಜ್ ಗೆ ಷೇರುಪೇಟೆ ಸಂಸ್ಥೆ ಸ್ವಾಗತ
ಬೆಂಗಳೂರು, ಮೇ 13,ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಅನ್ನು ಏಂಜಲ್ ಬ್ರೋಕಿಂಗ್ ಲಿಮಿಟೆಡ್ ಸಂಸ್ಥೆ ಸ್ವಾಗತಿಸಿದೆ.
ಈ ವಿಶೇಷ ಪ್ಯಾಕೇಜ್ ಘೋಷಣೆಯ ಪರಿಣಾಮ ಷೇರು ಮಾರುಕಟ್ಟೆಯು ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಶೇಕಡ 2.5 ರಷ್ಟು ಪ್ರಗತಿ ಸಾಧಿಸಿದೆ ಎಂದು ಏಂಜಲ್ ಬ್ರೋಕಿಂಗ್ ಲಿಮಿಟೆಡ್ ಸಂಸ್ಥೆಯ ಹೆಡ್ ಅಡ್ವೆಂಸರಿ ಆಮರ್ ದಿಯೋ ಸಿಂಗ್ ತಿಳಿಸಿದ್ದಾರೆ.
ಕೊರೊನಾ ಸಂಕಷ್ಟದ ಕಾಲದಲ್ಲಿ ಇಂಥದೊಂದು ದಿಟ್ಟ ನಡೆಯ ಅವಶ್ಯಕತೆ ಇತ್ತು. ಇದರಿಂದ ಎಲ್ಲರಲ್ಲೂ ಆತ್ಮವಿಶ್ವಾಸ ಮೂಡಿದೆ. ಆದಾಯದೊಂದಿಗೆ ಖರ್ಚನ್ನು ಸಮತೋಲನಗೊಳಿಸುವುದು ಸರ್ಕಾರದ ಮುಂದಿರುವ ದೊಡ್ಡ ಸವಾಲು.ವಾಯುಯಾನ, ಆತಿಥ್ಯ, ಪ್ರಯಾಣ ಮತ್ತು ಪ್ರವಾಸೋದ್ಯಮ ಮತ್ತು ಇತರ ಅನೇಕ ಕೈಗಾರಿಕೆಗಳ ಕುಸಿತದ ಅಂಚಿನಲ್ಲಿರುವ ಅನೇಕ ಕೈಗಾರಿಕೆಗಳನ್ನು ಉಳಿಸಲು ಸಕಾರಾತ್ಮಕ ಕ್ರಮಗಳು ಅಗತ್ಯವಾಗಿವೆ. ಹಣಕಾಸು ಸಚಿವರ ವಿವರವಾದ ಪ್ರಕಟಣೆಗಳಿಗಾಗಿ ನಾವು ಕಾಯಬೇಕಾಗಿದೆ. ಆರ್ಥಿಕ ಪ್ಯಾಕೇಜ್ ನ ಸೂಕ್ಷ್ಮ ವಿವರಗಳು ಮತ್ತು ವಿವಿಧ ಕ್ಷೇತ್ರಗಳಿಗೆ ಏನಿದೆ ಎಂಬುದರ ಕುರಿತು ಸ್ಪಷ್ಟತೆಯನ್ನು ನೀಡುತ್ತದೆ. ಅದೇನೇ ಇದ್ದರೂ ಇದೊಂದು ಸರ್ಕಾರದ ಅತ್ಯಂತ ಸ್ವಾಗತಾರ್ಹ ಹೆಜ್ಜೆಯಾಗಿದೆ ಮತ್ತು ಸ್ವಾವಲಂಬನೆಯ ಹಾದಿಯಲ್ಲಿ ಭಾರತ ಪ್ರಗತಿಗೆ ಸಹಾಯ ಮಾಡುತ್ತದೆ ಎಂದು ಆಮರ್ ದಿಯೋ ಸಿಂಗ್ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 