ಮದ್ಯ ಮತ್ತು ಮಾದಕಗಳಿಂದಾಗುವ ದುಷ್ಪರಿಣಾಮ ಕುರಿತು ಬೀದಿ ನಾಟಕ
Street play on the ill effects of alcohol and drugs
ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರವಿರಲು ಕರೆ
ಬಳ್ಳಾರಿ 11: ಮದ್ಯವು ಮನುಷ್ಯನ ದೇಹಕ್ಕೆ ಮಾರಕವಾಗಿದ್ದು, ಕುಡಿತದಿಂದ ಕೇವಲ ವ್ಯಕ್ತಿ ಮೇಲೆ ಪರಿಣಾಮ ಬೀರದೇ ಇಡೀ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ. ಹಾಗಾಗಿ ಮದ್ಯ ಮತ್ತು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಸಂಗನಕಲ್ಲು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ವಿ.ಗೋವಿಂದಮ್ಮ ನಾಗಿರೆಡ್ಡಿ ಅವರು ಹೇಳಿದರು.
ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿಮದ್ಯ ಮತ್ತು ಮಾದಕಗಳಿಂದಾಗುವ ದುಷ್ಪರಿಣಾಮಗಳ ಕುರಿತು ಬಳ್ಳಾರಿ ತಾಲ್ಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಮಂಗಳವಾರ ಏರಿ್ಡಸಿದ್ದ ಜಾಗೃತಿ ಗೀತೆಗಳ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾದದ್ದು, ಆದರೆ ಇಂದಿನ ಯುವಕರು ಹೆಚ್ಚಾಗಿ ಮದ್ಯಪಾನ ವ್ಯಸನಕ್ಕೆ ದಾಸರಾಗುತ್ತಿದ್ದು, ಇದರಿಂದ ದೂರ ಉಳಿಯಬೇಕು. ವ್ಯಸನಮುಕ್ತ ಗ್ರಾಮಕ್ಕೆ ನಾವೆಲ್ಲರೂ ಸೇರಿ ಕೈಜೋಡಿಸಬೇಕು ಎಂದರು.ಸಂಗನಕಲ್ಲು ಗ್ರಾಮ ಪಂಚಾಯತ್ ಕಾರ್ಯದರ್ಶಿ ಮಾರೆಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ನಂತರ ಚಿಗುರು ಕಲಾ ತಂಡದ ವತಿಯಿಂದ ಜಾಗೃತಿ ಗೀತೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಚಿಗುರು ಕಲಾ ತಂಡದ ಕಲಾವಿದರಾದ ಹುಲುಗಪ್ಪ. ಎಸ್.ಎಂ.ಹನುಮಯ್ಯ, ಹೆಚ್.ಜಿ.ಸುಂಕಪ್ಪ, ಬಿ.ಆನಂದ್, ಡಿ.ಹೇಮಂತ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 