ಬೀದಿನಾಟಕ, ಸಂಗೀತ ಕಾರ್ಯಕ್ರಮ
ಹಾವೇರಿ14: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯದಡಿ ಶಿಗ್ಗಾಂವ ತಾಲೂಕಿನ ಹುನಗುಂದ ಹಾಗೂ ಚಂದಾಪೂರ ಗ್ರಾಮಗಳಲ್ಲಿ ಮಂಗಳವಾರ ಜನಪದ ಹಾಡು ಹಾಗೂ ಬೀದಿನಾಟಕ ಪ್ರದರ್ಶನ ಮಾಡುವುದರ ಮೂಲಕ ಸರಕಾರದ ಯೋಜನೆಗಳನ್ನು ಅರಿವು ಮೂಡಿಸಲಾಯಿತು.
ರೈತರಿಗೆ ರೈತಕೇಂದ್ರದಿಂದ ದೊರೆಯುವ ಸೌಲಭ್ಯಗಳು ಮತ್ತು ಸ್ವಚ್ಛತೆ, ಶೌಚಾಲಯ ಬಳಕೆ, ಮಕ್ಕಳ ಶಿಕ್ಷಣ ವಿವಿಧ ವಿಷಯದ ಕುರಿತು ಜನಪದ ಗೀತೆ ಮತ್ತು ಬೀದಿನಾಟಕದ ಮೂಲಕ ಮಾಹಿತಿ ನೀಡಲಾಯಿತು.
ಶ್ರೀಮಲ್ಲಿಕಾರ್ಜುನ ಕಲಾ ತಂಡದ ಗುರುನಾಥ ಹುಬ್ಬಳ್ಳಿ ಹಾಗೂ ತಂಡದವರು ಬೀದಿನಾಟಕ ಪ್ರದರ್ಶಸಿದರು, ವಿರೇಶ ಸಂಕಿನಮಠ ಜನಪದ ಕಲಾತಂಡ ಕಲಾವಿದರು ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶೋರಣ್ಣ ಬಂಡಿವಡ್ಡರ. ಉಪಾಧ್ಯಕ್ಷರಾದ ಶೇಬೀನಾ ಬುಡ್ಡಣ್ಣನವರ, ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂದಿಪ್ ಎಸ್.ಡಿ., ಗ್ರಾಮಸ್ಥರಾದ ರಾಮಣ್ಣ ಮೂಲಿಮನಿ. ರವಿ ಕೊಡಗಿ, ಶಿವಪ್ಪ ಗೋವಿಂದಪ್ಪನವರ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 