ಸ್ವಚ್ಛ ಮೇವ ಜಯತೇ ಬೀದಿ ನಾಟಕ ಪ್ರದರ್ಶನ
ಲೋಕದರ್ಶನ ವರದಿ
ಘಟಪ್ರಭಾ 05: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಗ್ರಾಮ ಪಂಚಾಯತ ಶಿಂದಿಕುರಬೇಟ, ಜಿ.ಪಂ ಬೆಳಗಾವಿ, ಡಾ: ಬಿ.ಆರ್.ಅಂಬೇಡಕರ ಜಾನಪದ ಕಲಾ ಪೋಷಕ ಸಂಘ ಚಿಂಚಲಿ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಮೇವ ಜಯತೇ ಬೀದಿ ನಾಟಕ ಪ್ರದರ್ಶನ ಜರುಗಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗ್ರಾ.ಪಂ ಪಿಡಿಓ ಸಾಯೀಶ್ವರಿ ಮೆಣಸಿನಕಾಯಿ ಅವರು ಗ್ರಾಮವು ಪ್ಲಾಸ್ಟಿಕ್ ಮುಕ್ತ ಗ್ರಾಮವಾಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಗ್ರಾಮವು ಸುಂದರ, ಸ್ವಚ್ಛವಾಗಿ ಕಾಣಲು ಪ್ರತಿಯೊಬ್ಬ ಗ್ರಾಮಸ್ಥರು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು. ರೋಗ ಮುಕ್ತ ಗ್ರಾಮವಾಗಿಸಲು ಗ್ರಾಮಸ್ಥರ ಸಹಕಾರ ಮುಖ್ಯವಾಗಿದೆ ಎಂದರು.
ಪಿಡಿಓ ಸಾಯೀಶ್ವರಿ ಮೆಣಸಿನಕಾಯಿ, ಗ್ರಾ.ಪಂ ಲೆಕ್ಕಾಧಿಕಾರಿ ವಿಠ್ಠಲ ಕುಳ್ಳೂರ, ಗುಮಾಸ್ತ ಆನಂದ ಗುಡಕೇತ್ರ, ಮೋಹನ ಭೂಶ್ಯಾಗೋಳ, ಜ್ಯೋತಿ ಬಡ್ಡಿ, ಕಲಾವಿದರಾದ ಮಿಲಿಂದ ಸಂಗಣ್ಣವರ, ಅಜೀತ ಸಂಗಣ್ಣವರ, ನಾರಾಯಣ ದೇಶಪಾಂಡೆ, ಚೇತನ ಕಾಂಬಳೆ, ಪರುಶರಾಮ ಶಿಕ್ಕಲಗಾರ, ಯಮನವ್ವ ಜೋಕಾನಟ್ಟಿ, ಭಾರತಿ ಜೋಕಾನಟ್ಟಿ ಸೇರಿದಂತೆ ಇತರರು ಇದ್ದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 