ಸ್ವಚ್ಛ ಮೇವ ಜಯತೇ ಬೀದಿ ನಾಟಕ ಪ್ರದರ್ಶನ
ಲೋಕದರ್ಶನ ವರದಿ
ಘಟಪ್ರಭಾ 05: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಗ್ರಾಮ ಪಂಚಾಯತ ಶಿಂದಿಕುರಬೇಟ, ಜಿ.ಪಂ ಬೆಳಗಾವಿ, ಡಾ: ಬಿ.ಆರ್.ಅಂಬೇಡಕರ ಜಾನಪದ ಕಲಾ ಪೋಷಕ ಸಂಘ ಚಿಂಚಲಿ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಮೇವ ಜಯತೇ ಬೀದಿ ನಾಟಕ ಪ್ರದರ್ಶನ ಜರುಗಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗ್ರಾ.ಪಂ ಪಿಡಿಓ ಸಾಯೀಶ್ವರಿ ಮೆಣಸಿನಕಾಯಿ ಅವರು ಗ್ರಾಮವು ಪ್ಲಾಸ್ಟಿಕ್ ಮುಕ್ತ ಗ್ರಾಮವಾಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಗ್ರಾಮವು ಸುಂದರ, ಸ್ವಚ್ಛವಾಗಿ ಕಾಣಲು ಪ್ರತಿಯೊಬ್ಬ ಗ್ರಾಮಸ್ಥರು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು. ರೋಗ ಮುಕ್ತ ಗ್ರಾಮವಾಗಿಸಲು ಗ್ರಾಮಸ್ಥರ ಸಹಕಾರ ಮುಖ್ಯವಾಗಿದೆ ಎಂದರು.
ಪಿಡಿಓ ಸಾಯೀಶ್ವರಿ ಮೆಣಸಿನಕಾಯಿ, ಗ್ರಾ.ಪಂ ಲೆಕ್ಕಾಧಿಕಾರಿ ವಿಠ್ಠಲ ಕುಳ್ಳೂರ, ಗುಮಾಸ್ತ ಆನಂದ ಗುಡಕೇತ್ರ, ಮೋಹನ ಭೂಶ್ಯಾಗೋಳ, ಜ್ಯೋತಿ ಬಡ್ಡಿ, ಕಲಾವಿದರಾದ ಮಿಲಿಂದ ಸಂಗಣ್ಣವರ, ಅಜೀತ ಸಂಗಣ್ಣವರ, ನಾರಾಯಣ ದೇಶಪಾಂಡೆ, ಚೇತನ ಕಾಂಬಳೆ, ಪರುಶರಾಮ ಶಿಕ್ಕಲಗಾರ, ಯಮನವ್ವ ಜೋಕಾನಟ್ಟಿ, ಭಾರತಿ ಜೋಕಾನಟ್ಟಿ ಸೇರಿದಂತೆ ಇತರರು ಇದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 