ಹೊರ ರಾಜ್ಯಗಳ ಜನರ ಒಳನುಸುಳುವಿಕೆ ತಡೆಯಲು ಬಿಗಿ ಕ್ರಮ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 28,ಕೊರೋನಾ ವೈರಸ್ ಸೋಂಕು ನಿಯಂತ್ರಣ ಕ್ರಮಗಳನ್ನು ಮೀರಿ ಒಳನುಸುಳುತ್ತಿರುವವರನ್ನು ತಡೆಯಲು ಜಿಲ್ಲಾ, ತಾಲ್ಲೂಕು ಗಡಿ ಮತ್ತು ಒಳದಾರಿಗಳಲ್ಲೂ ಸೂಕ್ತ ಬಿಗಿ ಪೊಲೀಸ್ ಪಹರೆ ಏರ್ಪಡಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತಾಡಿದ ಅವರು, ಕಳ್ಳದಾರಿಗಳಲ್ಲಿ ಬೇರೆ ರಾಜ್ಯದ ಜನ ಅಕ್ರಮವಾಗಿ ಪ್ರವೇಶಿಸುತ್ತಿದ್ದು, ಇವರನ್ನು ಪತ್ತೆಹಚ್ಚಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ. ತಾಲೂಕುಗಡಿಗಳ ಜತೆಗೆ ಒಳದಾರಿಗಳಿಗೂ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.ಕೊರೋನಾ ಸೋಂಕು ನಿಯಂತ್ರಣ ಕಾರ್ಯದ ಮುಂಚೂಣಿಯಲ್ಲಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗೂ ಮಾಸ್ಕ್ , ಶೀಲ್ಡ್ ಹಾಗೂ ಸ್ಯಾನಟೈಸರ್ ಒದಗಿಸುವಂತೆ ಸೂಚಿಸಲಾಗಿದೆ. ಕ್ವಾರಂಟೈನ್ ನಿಗಾದಲ್ಲಿರುವವರು, ಹೆದ್ದಾರಿಗಳಲ್ಲಿ ನಿಯೋಜನೆಗೊಂಡಿರುವ ಎಲ್ಲ ಪೊಲೀಸರಿಗೆ ಕಡ್ಡಾಯವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ ನಡೆಸುವಂತೆಯೂ ಆದೇಶಿಸಲಾಗಿದೆ ಎಂದು ಹೇಳಿದರು.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 