ನೋಂದಣಿಗೆ ಆರ್ಟಿಓಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದರೆ ನಿರ್ಧಾಕ್ಷಿಣ್ಯ ಕ್ರಮ:ಸಚಿವ ರಾಮಲಿಂಗಾರೆಡ್ಡಿ
Strict action will be taken against those who create records by cheating at RTOs for registration: M
ಪರಿಷತ್ತಿನಲ್ಲಿ ಡಿ.17ರಂದು ಸದಸ್ಯರಾದ ಶರವಣ ಟಿ ಎ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆಗೆ ಪ್ರತಿಕ್ರಿಯಿಸಿದ ಸಚಿವರು, ಮಂಗಳೂರು ಮತ್ತು ಉಡುಪಿ ಆರ್.ಟಿ.ಒ ಕಛೇರಿಗಳಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ಕಾರಿನ ನಿಜವಾದ ಮೌಲ್ಯವನ್ನು ಮರೆಮಾಚಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಛೇರಿಯ ಕೇಂದ್ರ ಸ್ಥಾನೀಯ ಸಹಾಯಕರು, ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಉಡುಪಿ ಕಛೇರಿಯ ಅಧೀಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ಇಲಾಖಾ ವಿಚಾರಣೆ ಜಾರಿಯಲ್ಲಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ರ ಪ್ರಸ್ತಾವನೆಯ ಮೇರೆಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 17(ಎ) ಅನ್ವಯ ಪೂರ್ವಾನುಮತಿಯನ್ನು ಸಹ ನೀಡಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 