ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಸಾವು
Student dies by hanging in hostel
ಲೋಕದರ್ಶನ ವರದಿ
ಇಂಡಿ 21: ನಗರದ ವಿಜಯಪೂರ ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಇಂಡಿ ಟೌನ್ ಯಲ್ಲಿ ಇಂದು ಬೆಳಿಗ್ಗೆ 11-30 ಸುಮಾರಿಗೆ ಯುವಕನೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ನಗರದಲ್ಲಿ ನಡೆದಿದೆ. ಡೆತ್ ನೋಟ ಬರೆದು ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಅಭಿಜಿತ್ ಉರ್ ಅಂಬರೀಶ್ ಭೀಮರಾಯ ಸಮಗಾರ( 17) ಎಂದು ತಿಳಿದು ಬಂದಿದೆ. ಈ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಹಗಲು ಹೊತ್ತಿನಲ್ಲಿ ಈ ಹಾಸ್ಟೆಲ್ ನಲ್ಲಿ ವಾರ್ಡನ್ ಆಗಿರಬಹುದು ಅಥವಾ ಸಿಬ್ಬಂದಿಗಳು ಆಗಿರಬಹುದು ಯಾರು ಇಲ್ಲದೇ ಇರುವುದರಿಂದ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ನನ್ನ ಮಗನು ಆತ್ಮಹತ್ಯೆ ಮಾಡಿಕೊಂಡಿಲ್ಲ ಇದು ಕೊಲೆ ಆಗಿದೆ ಎಂದು ಆರೋಪಿಸುತ್ತಿದ್ದಾರೆ. ಈ ಸುದ್ದಿ ತಿಳಿದು ಸ್ಥಳಕ್ಕೆ ಇಂಡಿ ಉಪವಿಭಾಗಾಧಿಕಾರಿ ಅಧಿಕಾರಿ ಗುರುಸ್ವಾಮಿ ಹಾಗೂ ತಹಶೀಲದಾರ ನಾಗೇಂದ್ರ ಕೊಳಶೆಟ್ಟಿ ಅವರು ಬೇಟಿ ನೀಡಿ ಘಟನೆ ಬಗ್ಗೆ ವರದಿ ಪಡೆದುಕೊಂಡರು ಹಾಗೂ ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಮತೇ ಯಾವುದೇ ಕಾರಣವೋ ಎಂಬುದು ಪೋಲಿಸರ ತನಿಖೆಯಿಂದ ಗೊತ್ತಾಗಲಿದೆ. ಏನೇ ಇರಲಿ ಭವಿಷ್ಯದಲ್ಲಿ ಬಾಳಿ ಬದುಕಬೇಕಾದ ವಿದ್ಯಾರ್ಥಿ ಭವಿಷ್ಯ ಸಾವಿನಲ್ಲಿ ಅಂತ್ಯವಾಗಿರುವುದು ದುರದೃಷ್ಟಕರ ಸಂಗತಿ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 