ಸಚಿವರ ಕಾರು ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
ಲೋಕದರ್ಶನವರದಿ
ರಾಣೇಬೆನ್ನೂರು: ಮಾಕನೂರು ಗ್ರಾಮದಿಂದ ರಾಣೇಬೆನ್ನೂರಿಗೆ ಸಂಚರಿಸಲು ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೇ ಶಾಲಾ-ಕಾಲೇಜುಗಳಲ್ಲಿ ನಡೆಯುತ್ತಿರುವ ಸರಣಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾಥರ್ಿಗಳು ಮಾಕನೂರು ವೃತ್ತದ ಬಳಿ ಭಾರಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ.
ಕುಮಾರಪಟ್ಟಣ-ಕೋಡಿಯಾಲ ಗ್ರಾಮದಲ್ಲಿ ಉಪ-ಚುನಾವಣೆ ಅಭ್ಯಥರ್ಿ ಪರ ಬಹಿರಂಗ ಸಭೆ ನಡೆಸಿ ರಾಣೇಬೆನ್ನೂರತ್ತ ಆರೋಗ್ಯ ಸಚಿವರ ಕಾರು ಮಾಕನೂರು ವೃತ್ತದ ಬಳಿ ಬರುತ್ತಿದ್ದಂತೆ ಧರಣಿ ಆರಂಭಿಸಿದ ನೂರಾರು ವಿದ್ಯಾಥರ್ಿಗಳು, ರೈತ ಮುಖಂಡರು, ಸಚಿವರ ಕಾರನ್ನು ನಡೆದು ನಡೆದಿರುವ ವಾಸ್ಥವಿಕ ಸ್ಥಿತಿಯನ್ನು ಮನವರಿಸಿದರು. ಇದರಿಂದ ಕೆಂಡಾಮಂಡಲರಾದ ಶ್ರೀರಾಮುಲು ಅವರು ವಿದ್ಯಾಥರ್ಿಗಳು ಮತ್ತು ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.
ಸರಣಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾಥರ್ಿಗಳು ಸ್ಥಳಕ್ಕೆ ಘಟಕದ ವ್ಯವಸ್ಥಾಪಕರು ಮತ್ತು ಅವಹೇಳನಕಾರಿ ಶಬ್ದದಿಂದ ವತರ್ಿಸಿದ ಬಸ್ ಚಾಲಕ ಬರುವರೆಗೂ ಸ್ಥಳ ಬಿಟ್ಟಿ ಕದಲುವುದಿಲ್ಲವೆಂದು ಬಿಗಿಪಟ್ಟು ಸಡಿಲಿಸದೇ, ಧರಣಿ ಆರಂಭಿಸಿದ್ದರು. ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಿದ್ದ ಶ್ರೀರಾಮುಲು ಅವರು ವಿದ್ಯಾಥರ್ಿಗಳೊಂದಿಗೆ ಶಾಂತ ಚಿಂತತೆಯಿಂದ ಅವರ ಪರಿಸ್ಥಿತಿಯನ್ನು ಆಲಿಸಿ ಘಟಕ ವ್ಯವಸ್ಥಾಪಕರಿಗೆ ಮುಂಜಾನೆ 7 ಗಂಟೆಯಿಂದ 10-30 ಅವಧಿಯಲ್ಲಿ ಕನಿಷ್ಠ 4 ಬಸ್ಗಳು ಸಂಚರಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಆದೇಶಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಈರಣ್ಣ ಹಲಗೇರಿ, ಸುರೇಶ ಮಲ್ಲಾಪುರ, ಶಿವಣ್ಣ ಬಾಕರ್ಿ, ರಾಮಣ್ಣ ಬಾಕರ್ಿ, ದಿನೇಶ ಪಾಟೀಲ, ಮೇಘರಾಜ ಕವಲೆತ್ತು ಸೇರಿದಂತೆ ಮಾಕನೂರ ಗ್ರಾಮದ ರೈತರು ನೂರಾರು ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 