ಯರಗುಡಿ ಶಾಲೆ ರಕ್ಷಿಸಲು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ
Students, parents protest to save Yaragudi school
ಬಳ್ಳಾರಿ 28: ತಾಲೂಕಿನ ಹೊಸ ಯರಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಕ್ಷಿಸಲು ವಿದ್ಯಾರ್ಥಿಗಳ ಪೋಷಕರ ಪ್ರತಿಭಟನೆ ಶಾಲೆಯ ಹತ್ತಿರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರಾದ ಶಾಂತಿಯವರು ಮಾತನಾಡಿ ಹೊಸ ಯರಗುಡಿ ಸರ್ಕಾರಿ ಪ್ರಾಥಮಿಕ ಶಾಲೆ ಬಡವರಿಗೆ ಇರುವುದು ಇದು ಒಂದೇ ಸರ್ಕಾರಿ ಶಾಲೆ.
ಈ ಶಾಲೆಯನ್ನು ಮುಚ್ಚಿ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಹೋಗಬೇಕೆಂದರೆ 5 ವರ್ಷದ ಮಕ್ಕಳು ಒಂದು ಕಿಲೋ ಮೀಟರ್ದೂರ ಹೇಗೆ ಹೋಗಬೇಕು? ಜೊತೆಗೆ ಅಲ್ಲಿನ ಜನರು ಶಾಲೆಯ ಕಟ್ಟಡ ಸರಿ ಇಲ್ಲದಿದ್ದಾಗ ಊರಿನ ಜನರೆಲ್ಲರೂ ಸೇರಿ ಶಾಲೆಯರಸ್ತೆ ಸರಿ ಮಾಡಬೇಕೆಂದು ಹೋರಾಟ ಮಾಡಿದರು ಹಾಗೆಯೇ ಇಲ್ಲಿ 8ನೇ ತರಗತಿ ವರೆಗೂ ಶಾಲೆ ಸಹ ಮಾಡಬೇಕೆಂದು ಬೇಡಿಕೆ ಸಹ ಇಟ್ಟರು. ಹಾಗೆಯೇ ಇಲ್ಲಿ ವಾಸಿಸುವ ಜನರೆಲ್ಲರೂ ದುಡಿಯುವ ರೈತರು, ಕಾರ್ಮಿಕರು. ಬಡವರ ಮಕ್ಕಳು 150ಕ್ಕೂ ಹೆಚ್ಚು ಅಧಿಕ ಸಂಖ್ಯೆಯಲ್ಲಿ ದಾಖಲಾತಿ ಇರುವ ಸರ್ಕಾರಿ ಶಾಲೆ ಮುಚ್ಚಬಾರದು ಎಂಬುದು ಪೋಷಕರು ಆಗ್ರಹವಾಗಿದೆ.
ಈ ಪ್ರತಿಭಟನೆಯ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ,ಎಐಡಿಎಸ್ಓ ಸದಸ್ಯರಾದ ಕಾಂತೇಶ್, ತಿಪ್ಪೇಸ್ವಾಮಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ನಾಗಮ್ಮ ಹಾಗೂ ಊರಿನ ಸರ್ಕಾರಿ ಶಾಲೆ ಉಳಿಸುವ ಸಮಿತಿ ಅಧ್ಯಕ್ಷರು ಪಾರ್ವತಿ ಕಾರ್ಯದರ್ಶಿ ಅಂಬಣ್ಣ, ಸದಸ್ಯರಾದ ಶೇಖರ್, ಪೋತಪ್ಪ, ಲಕ್ಷ್ಮಮ್ಮ,ಹಾಗೂ ಹಿರಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 