ವಿದ್ಯಾರ್ಥಿಗಳು ದೊಡ್ಡ ಕನಸು ಇಟ್ಟುಕೊಂಡು ಸಾಧನೆ ಮಾಡಬೇಕು : ಡಾ. ಅರವಿಂದ
ಬೆಳಗಾವಿ, 13: ವಿದ್ಯಾರ್ಥಿ ಗಳು ತಮ್ಮ ಜೀವನದಲ್ಲಿ ದೊಡ್ಡ ಕನಸು ಇಟ್ಟುಕೊಂಡು ಸಾಧನೆ ಮಾಡಬೇಕು ಎಂದು ಬೆಳಗಾವಿ ರಂಗಸಂಪದ ಅಧ್ಯಕ್ಷ ಡಾ.ಅರವಿಂದ ಕುಲಕಣರ್ಿ ಹೇಳಿದರು.
ನಗರದ ಭರತೇಶ ಹೋಮಿ ಯೋಪತಿಕ್ ವೈದ್ಯಕೀಯ ಕಾಲೇಜಿನಲ್ಲಿ ಭಾನುವಾರ ವಿದ್ಯಾಪೋಷಕ ಸಂಸ್ಥೆ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಧನ ಸಹಾಯ ಕಾರ್ಯಕ್ರಮದಲ್ಲಿ
ಮಾತನಾಡಿದರು.
ಸಮಯಪ್ರಜ್ಞೆ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕು. ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಆ ಅವಧಿಯನ್ನು ವ್ಯರ್ಥಗೊಳಿಸದೇ ದೊಡ್ಡ ಸಾಧನೆಯ ಕನಸು ಕಾಣಬೇಕು ಎಂದರು.
ವಿದ್ಯಾಪೋಷಕ ಸಂಸ್ಥೆಯ ಧನಸಹಾಯ ಪಡೆದು ಸದ್ಯ ಧಾರವಾಡದಲ್ಲಿ ಕೆಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಭೀಮಪ್ಪ ಲಾಳಿ ಮಾತನಾಡಿ, ಭವಿಷ್ಯದಲ್ಲಿ ನೀವು ಮಾಡುವ ಉದ್ಯೋಗದಲ್ಲಿ ಶ್ರದ್ದೆಯಿಟ್ಟು ಕೆಲಸ ಮಾಡಿ ಎಂದರು.
ಭರತೇಶ ಶಿಕ್ಷಣ ಸಂಸ್ಥೆ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಮಾತನಾಡಿ, ಇಂದು ವಿದ್ಯಾರ್ಥಿಗಳು ಎಂಜಿನಿಯರಿಂಗ್ ಶಿಕ್ಷಣದತ್ತ ಹೆಚ್ಚು ಗಮನಹರಿಸುತ್ತಿದ್ದಾರೆ. ಇದರೊಂದಿಗೆ ನಾಗರಿಕ ಸೇವಾ ಪರೀಕ್ಷೆ ಬರೆಯುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಭರತೇಶ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಶ್ರೀಕಾಂತ ಕೊಂಕಣಿ, ದಾನಿಗಳಾದ ಮಡಿವಾಳಪ್ಪ ಮೆಳವಂಕಿ, ರಮೇಶ ಗಂಗೂರ, ದಯಾನಂದ ಗಂಗೂರ ಉಪಸ್ಥಿತರಿದ್ದರು.
ಧನಸಹಾಯ ಪಡೆದ ಅನಿಲ್, ಸುಕನ್ಯಾ, ಪ್ರಿಯಾಂಕಾ ಅನಿಸಿಕೆ ಹಂಚಿಕೊಂಡರು.
ವಿದ್ಯಾ ಹಾಗೂ ಸಂಗಡಿಗರು ಪ್ರಾರ್ಥಿ ಸಿದರು.
ರತ್ನಾ ಪಾಟೀಲ, ಪ್ರಸನ್ನ ಪಾಶ್ಚಾಪುರ ನಿರೂಪಿಸಿದರು. ಗೌರಿ ಕಾಂಬಳೆ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 