ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನ ಅಗತ್ಯ
ಘಟಪ್ರಭಾ 21: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸುತ್ತ ಸಾಗಬೇಕು ಎಂದು ನಿರ್ದೇಶಕ ಬಿ.ಎಸ್.ಉದಗಟ್ಟಿ ಹೇಳಿದರು.
ಅವರು ಶನಿವಾರ ಸ್ಥಳೀಯ ಸರ್.ಎಮ್.ವಿಶ್ವೇಶ್ವರಯ್ಯಾ ಆಯ್.ಟಿ.ಆಯ್ ಕಾಲೇಜಿನ ಸನ್-2019 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ತಾವು ಕಲಿತ ಶಿಕ್ಷಣ ತಮ್ಮ ಬಾಳಿನಲ್ಲಿ ಮಹತ್ವದ ಘಟ್ಟ. ಅದು ತಮ್ಮ ಜೀವನದ ತಿರುವನ್ನೇ ಬದಲಿಸಬಹುದು. ಕಾರಣ ಶ್ರದ್ಧೆಯಿಂದ ಕಲಿತು ಉನ್ನತ ಮಟ್ಟಕ್ಕೆ ಹೋಗಬೇಕು ಎಂದರು. ಕಾರ್ಯಕ್ರಮವನ್ನು ಜೋತಿ ಬೆಳಗಿಸುವದರ ಮೂಲಕ ಕಾಲೇಜಿನ ಉಪಾಧ್ಯಕ್ಷ ಎ.ಎಸ್.ವಾಡೇದ ಉದ್ಘಾಟಿಸಿ, ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಎಸ್.ಸಿ.ಮಠದ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಜೀವನ ಬಂಗಾರದಂತೆ ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಾವು ಕಲಿತ ಕಾಲೇಜಿಗೆ ಕೀರ್ತಿ ತರುವದರೊಂದಿಗೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅನಸಿಕೆಗಳು, ಬಹುಮಾನ ವಿತರಣೆ ನಡೆಯಿತು. ವೇದಿಕೆಯಲ್ಲಿ ಎಸ್.ಎಸ್.ಕಬ್ಬೂರ,ಎ.ಎಸ್.ವಾಡೇದ, ಎಸ್.ಡಿ. ಶಿಂದೋಳೀಮಠ, ಡಿ.ಪಿ.ಲಕ್ಷೇಟ್ಟಿ, ಆರ್.ಎಸ್.ಕಂಬಾರ, ಜಿ.ಎಸ್.ರಜಪೂತ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು. ಶಿಕ್ಷಕ ಎಸ್.ಎಸ್.ಕಲ್ಯಾಣಿ ನಿರೂಪಿಸಿದರು, ಎಸ್.ಎ. ತೀರ್ಥನವರ ಬಹುಮಾನ ವಿತರಿಸಿದರು, ರೂಪಾ ಬೆನಕಟ್ಟಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 