ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನ ಅಗತ್ಯ
ಘಟಪ್ರಭಾ 21: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸುತ್ತ ಸಾಗಬೇಕು ಎಂದು ನಿರ್ದೇಶಕ ಬಿ.ಎಸ್.ಉದಗಟ್ಟಿ ಹೇಳಿದರು.
ಅವರು ಶನಿವಾರ ಸ್ಥಳೀಯ ಸರ್.ಎಮ್.ವಿಶ್ವೇಶ್ವರಯ್ಯಾ ಆಯ್.ಟಿ.ಆಯ್ ಕಾಲೇಜಿನ ಸನ್-2019 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ತಾವು ಕಲಿತ ಶಿಕ್ಷಣ ತಮ್ಮ ಬಾಳಿನಲ್ಲಿ ಮಹತ್ವದ ಘಟ್ಟ. ಅದು ತಮ್ಮ ಜೀವನದ ತಿರುವನ್ನೇ ಬದಲಿಸಬಹುದು. ಕಾರಣ ಶ್ರದ್ಧೆಯಿಂದ ಕಲಿತು ಉನ್ನತ ಮಟ್ಟಕ್ಕೆ ಹೋಗಬೇಕು ಎಂದರು. ಕಾರ್ಯಕ್ರಮವನ್ನು ಜೋತಿ ಬೆಳಗಿಸುವದರ ಮೂಲಕ ಕಾಲೇಜಿನ ಉಪಾಧ್ಯಕ್ಷ ಎ.ಎಸ್.ವಾಡೇದ ಉದ್ಘಾಟಿಸಿ, ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಎಸ್.ಸಿ.ಮಠದ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಜೀವನ ಬಂಗಾರದಂತೆ ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಾವು ಕಲಿತ ಕಾಲೇಜಿಗೆ ಕೀರ್ತಿ ತರುವದರೊಂದಿಗೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅನಸಿಕೆಗಳು, ಬಹುಮಾನ ವಿತರಣೆ ನಡೆಯಿತು. ವೇದಿಕೆಯಲ್ಲಿ ಎಸ್.ಎಸ್.ಕಬ್ಬೂರ,ಎ.ಎಸ್.ವಾಡೇದ, ಎಸ್.ಡಿ. ಶಿಂದೋಳೀಮಠ, ಡಿ.ಪಿ.ಲಕ್ಷೇಟ್ಟಿ, ಆರ್.ಎಸ್.ಕಂಬಾರ, ಜಿ.ಎಸ್.ರಜಪೂತ ಸೇರಿದಂತೆ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು. ಶಿಕ್ಷಕ ಎಸ್.ಎಸ್.ಕಲ್ಯಾಣಿ ನಿರೂಪಿಸಿದರು, ಎಸ್.ಎ. ತೀರ್ಥನವರ ಬಹುಮಾನ ವಿತರಿಸಿದರು, ರೂಪಾ ಬೆನಕಟ್ಟಿ ವಂದಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 