ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಶ್ರಮವಹಿಸಬೇಕಾಗಿದೆ: ಮನೋಹರ ಕುಟ್ರೆ
Students need to work harder for their future: Manohar Kutre
ಬೆಳಗಾವಿ 05: ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಶ್ರಮವಹಿಸಬೇಕಾಗಿದೆ ಮತ್ತು ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಪ್ರಮುಖ ಕಾಲಘಟ್ಟವಾಗಿದ್ದು ವೃಥಾ ಕಾಲಹರಣ ಮಾಡದೆ ಶಿಕ್ಷಣದ ಸದುಪಯೋಗ ಪಡೆದುಕೊಳ್ಳಬೇಕೆಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸ್ಟರ್ ಫ್ಲೂಡಟೆಕ್ ಮಾಲೀಕರಾದ ಮನೋಹರ ಕುಟ್ರೆ ಅವರು ವಿದ್ಯಾರ್ಥಿಗಳಿಗೆ ಇಂದು ನಡೆದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಪ್ರೋತ್ಸಾಹ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಮಿನಿ ಪ್ರೋಜೆಕ್ಟ್ ಕಾರ್ಯಾಗಾರದಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಎಫ್. ವಿ. ಮಾನ್ವಿ ಅವರು ವಿದ್ಯಾರ್ಥಿಗಳಿಗೆ ಉದ್ಯೋಗಗಳನ್ನು ಅರಸಿ ಹೋಗುವುದರ ಬದಲಾಗಿ ಉದ್ಯಮಿಗಳಾಗುವ ಕಡೆಗೆ ನಿಮ್ಮ ಪ್ರಯತ್ನವಿರಲಿ ಎಂದು ಉತ್ತೇಜನ ನೀಡಿದರು. ಪ್ರಾಚಾರ್ಯರಾದ ಡಾ. ಬಿ.ಆರ್.ಪಟಗುಂದಿ ಅವರು ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಗುರಿ ತಲುಪಲು ಕಠಿಣ ಪರಿಶ್ರಮ ಅವಶ್ಯಕವಾಗಿದ್ದು ಮುಂಬರುವ ಸವಾಲುಗಳನ್ನು ತಾಳ್ಮೆ ಮತ್ತು ಯುಕ್ತಿಯಿಂದ ಎದುರಿಸಬೇಕೆಂದು ಹಿತನುಡಿಗಳನ್ನಾಡಿದರು.
ವಿಭಾಗದ ಮುಖ್ಯಸ್ಥರಾದ ಡಾ. ರಾಜೇಂದ್ರ ಗಲಗಲಿ ಅವರು ಸ್ವಾಗತಿಸಿದರು. ಪ್ರೋ. ಎಸ್.ಸಿ.ಜಂಪಾ ವಂದಿಸಿದರು. ಭೂಮಿಕಾ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 