ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ರಾಯಬಾಗ 17: ಧಾರವಾಡನಲ್ಲಿ ನಡೆದ ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಪಟ್ಟಣದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆದರ್ಶ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಡಿ.ಎಮ್‌. ಐಹೊಳೆ ಅಭಿನಂದಿಸಿದ್ದಾರೆ. ದೈಹಿಕ ಶಿಕ್ಷಕ ಎಸ್‌.ಜೆ.ಮಾನೆ, ನಿರ್ದೇಶಕ ಮಹೇಶ ಕರಮಡಿ, ಶಿವಾನಂದ ಐಹೊಳೆ, ಪ್ರಧಾನ ಗುರುಗಳಾದ ಬಿ ಬಿ ಪೂಜಾರ ಇದ್ದರು.