ವಿದ್ಯಾರ್ಥಿಗಳನ್ನು ಉತ್ತಮ ಸುಸಂಸ್ಕೃತರನ್ನಾಗಿ ರೂಪಿಸಬೇಕು: ಐಹೊಳೆ
Students should be made well cultured: Aihole
ರಾಯಬಾಗ 04: ಹೆಣ್ಣು ಮಕ್ಕಳು ಶಿಕ್ಷಣ ಪಡೆದರೆ ಕುಟುಂಬ ಮತ್ತು ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ಪಟ್ಟಣದ ಡಾ.ಬಾಬು ಜಗಜ್ಜೀವನ್ರಾಮ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿರುತ್ತಿರುವುದು ಸಂತೋಷ ವಿಷಯ. ಉಪನ್ಯಾಸಕರು ಒಳ್ಳೆಯ ಬೋಧನೆ ಜೊತೆಗೆ ವಿದ್ಯಾರ್ಥಿಗಳನ್ನು ಉತ್ತಮ ಸುಸಂಸ್ಕೃತರನ್ನಾಗಿ ರೂಪಿಸಬೇಕೆಂದರು.
ಪ್ರಾಚಾರ್ಯ ರಾಜಕುಮಾರ ಕಾಗೆ ಅಧ್ಯಕ್ಷತೆಯನ್ನು ವಹಿಸಿದ್ದರು. ಹಾರೂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ ಪ್ರಾಚಾರ್ಯ ಡಾ.ಎಲ್.ಬಿ.ಬನಶಂಕರಿ, ಡಾ.ವಿವೇಕಾನಂದ ಮಾನೆ, ಡಾ.ಶಂಕರ ರಾಠೋಡ, ಸಂತೋಷ ಸಮಾಜೆ, ಡಾ.ವಿಜಯಲಕ್ಷ್ಮಿ, ಡಾ.ಉತ್ತಮ ಕಾಂಬಳೆ, ಎಮ್.ಎಸ್.ಯಾದವಾಡೆ, ಡಾ.ಪ್ರಸಾದ ಆರ್.ಎ, ಅಜೀಜ ಸನದಿ, ಡಾ.ರವಿ ಎಮ್.ವಿ, ಮನೋಜಕುಮಾರ ಕಾಂಬಳೆ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 