ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ರೂಢಿಸಿಕೊಳ್ಳಿ : ಕುಬೇರನಾಯ್ಕ
Students should be punctual and disciplined: Kubera Nayak
ಹೂವಿನಹಡಗಲಿ 31: ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ರೂಢಿಸಿಕೊಂಡಾಗ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಬೆಂಗಳೂರಿನ ಪೊಲೀಸ್ ಇಲಾಖೆ ಪೊಲೀಸ್ ಕಾನ್ಸಟೆಬಲ್ ಕುಬೇರನಾಯ್ಕ ತಿಳಿಸಿದರು.ಇಲ್ಲಿಗೆ ಸಮೀಪದ ಹಂಪಸಾಗರ ಗ್ರಾಮದ ಸೇವಾಲಾಲ್ ವಿದ್ಯಾಸಂಸ್ಥೆಯ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಶಿಕ್ಷಣದ ಜತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿ ವರ್ಷವೂ ಆಯೋಜಿಸುವ ಸ್ಪರ್ಧೆಗಳಿಗೆ ಬಹುಮಾನ ನೀಡಲಾಗುವುದು ಎಂದರು. ಸಂಸ್ಥೆಯ ಕಾರ್ಯದರ್ಶಿ ಮೀನಾಕ್ಷಿ ನಾಣಿಕಿನಾಯ್ಕ ಮಾತನಾಡಿದರು. ರಸಪ್ರಶ್ನೆ, ಪ್ರಬಂಧ, ವಾಲಿಬಾಲ್ ಸೇರಿ ನಾನಾ ಪಠ್ಯೇತರ ಚಟುವಟಿಕೆಯಲ್ಲಿ ವಿಜೇತರಿಗೆ ಕುಬೇರನಾಯ್ಕ ಬಹುಮಾನ ವಿತರಿಸಿದರು. ಇದೇವೇಳೆ ಶಿಕ್ಷಕಿಯರಾದ ಜಿ.ಎಚ್.ಕಟ್ಟೆಮ್ಮ, ಡಿ.ಗಾಯತ್ರಿ, ಎಚ್.ರವಿಕುಮಾರನಾಯ್ಕ, ಟಿ.ಸುಮಾ ಇವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕರಾದ ಯು.ಪಿ.ವೀರನಗೌಡ, ವೀರಯ್ಯಮೂರ್ತಿ, ಥಾವರನಾಯ್ಕ, ಮುರ್ತಿನಾಯ್ಕ, ಉಮೇಶ್ ನಾಯ್ಕ, ಸಂಪತ್ಕುಮಾರ್ ಇತರರಿದ್ದರು. ಶಿಕ್ಷಕರಾದ ಗಣೇಶ, ಎಚ್.ಶಿವಪುತ್ರ್ಪ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 