ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ರೂಢಿಸಿಕೊಳ್ಳಿ : ಕುಬೇರನಾಯ್ಕ
Students should be punctual and disciplined: Kubera Nayak
ಹೂವಿನಹಡಗಲಿ 31: ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ರೂಢಿಸಿಕೊಂಡಾಗ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಬೆಂಗಳೂರಿನ ಪೊಲೀಸ್ ಇಲಾಖೆ ಪೊಲೀಸ್ ಕಾನ್ಸಟೆಬಲ್ ಕುಬೇರನಾಯ್ಕ ತಿಳಿಸಿದರು.ಇಲ್ಲಿಗೆ ಸಮೀಪದ ಹಂಪಸಾಗರ ಗ್ರಾಮದ ಸೇವಾಲಾಲ್ ವಿದ್ಯಾಸಂಸ್ಥೆಯ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಶಿಕ್ಷಣದ ಜತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿ ವರ್ಷವೂ ಆಯೋಜಿಸುವ ಸ್ಪರ್ಧೆಗಳಿಗೆ ಬಹುಮಾನ ನೀಡಲಾಗುವುದು ಎಂದರು. ಸಂಸ್ಥೆಯ ಕಾರ್ಯದರ್ಶಿ ಮೀನಾಕ್ಷಿ ನಾಣಿಕಿನಾಯ್ಕ ಮಾತನಾಡಿದರು. ರಸಪ್ರಶ್ನೆ, ಪ್ರಬಂಧ, ವಾಲಿಬಾಲ್ ಸೇರಿ ನಾನಾ ಪಠ್ಯೇತರ ಚಟುವಟಿಕೆಯಲ್ಲಿ ವಿಜೇತರಿಗೆ ಕುಬೇರನಾಯ್ಕ ಬಹುಮಾನ ವಿತರಿಸಿದರು. ಇದೇವೇಳೆ ಶಿಕ್ಷಕಿಯರಾದ ಜಿ.ಎಚ್.ಕಟ್ಟೆಮ್ಮ, ಡಿ.ಗಾಯತ್ರಿ, ಎಚ್.ರವಿಕುಮಾರನಾಯ್ಕ, ಟಿ.ಸುಮಾ ಇವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕರಾದ ಯು.ಪಿ.ವೀರನಗೌಡ, ವೀರಯ್ಯಮೂರ್ತಿ, ಥಾವರನಾಯ್ಕ, ಮುರ್ತಿನಾಯ್ಕ, ಉಮೇಶ್ ನಾಯ್ಕ, ಸಂಪತ್ಕುಮಾರ್ ಇತರರಿದ್ದರು. ಶಿಕ್ಷಕರಾದ ಗಣೇಶ, ಎಚ್.ಶಿವಪುತ್ರ್ಪ ನಿರ್ವಹಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 