ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ರೂಢಿಸಿಕೊಳ್ಳಿ : ಕುಬೇರನಾಯ್ಕ
Students should be punctual and disciplined: Kubera Nayak
ಹೂವಿನಹಡಗಲಿ 31: ವಿದ್ಯಾರ್ಥಿಗಳು ಸಮಯಪ್ರಜ್ಞೆ, ಶಿಸ್ತು ರೂಢಿಸಿಕೊಂಡಾಗ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಬೆಂಗಳೂರಿನ ಪೊಲೀಸ್ ಇಲಾಖೆ ಪೊಲೀಸ್ ಕಾನ್ಸಟೆಬಲ್ ಕುಬೇರನಾಯ್ಕ ತಿಳಿಸಿದರು.ಇಲ್ಲಿಗೆ ಸಮೀಪದ ಹಂಪಸಾಗರ ಗ್ರಾಮದ ಸೇವಾಲಾಲ್ ವಿದ್ಯಾಸಂಸ್ಥೆಯ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಶಿಕ್ಷಣದ ಜತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪ್ರತಿ ವರ್ಷವೂ ಆಯೋಜಿಸುವ ಸ್ಪರ್ಧೆಗಳಿಗೆ ಬಹುಮಾನ ನೀಡಲಾಗುವುದು ಎಂದರು. ಸಂಸ್ಥೆಯ ಕಾರ್ಯದರ್ಶಿ ಮೀನಾಕ್ಷಿ ನಾಣಿಕಿನಾಯ್ಕ ಮಾತನಾಡಿದರು. ರಸಪ್ರಶ್ನೆ, ಪ್ರಬಂಧ, ವಾಲಿಬಾಲ್ ಸೇರಿ ನಾನಾ ಪಠ್ಯೇತರ ಚಟುವಟಿಕೆಯಲ್ಲಿ ವಿಜೇತರಿಗೆ ಕುಬೇರನಾಯ್ಕ ಬಹುಮಾನ ವಿತರಿಸಿದರು. ಇದೇವೇಳೆ ಶಿಕ್ಷಕಿಯರಾದ ಜಿ.ಎಚ್.ಕಟ್ಟೆಮ್ಮ, ಡಿ.ಗಾಯತ್ರಿ, ಎಚ್.ರವಿಕುಮಾರನಾಯ್ಕ, ಟಿ.ಸುಮಾ ಇವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕರಾದ ಯು.ಪಿ.ವೀರನಗೌಡ, ವೀರಯ್ಯಮೂರ್ತಿ, ಥಾವರನಾಯ್ಕ, ಮುರ್ತಿನಾಯ್ಕ, ಉಮೇಶ್ ನಾಯ್ಕ, ಸಂಪತ್ಕುಮಾರ್ ಇತರರಿದ್ದರು. ಶಿಕ್ಷಕರಾದ ಗಣೇಶ, ಎಚ್.ಶಿವಪುತ್ರ್ಪ ನಿರ್ವಹಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 