ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಸಾಹಿತಿ ಮಾರ್ತಾಂಡಪ್ಪ ಕತ್ತಿ
Students should develop a scientific attitude: Literary writer Marthandappa Katti
ಧಾರವಾಡ 24: ವಿಜ್ಞಾನ ಮತ್ತು ತಂತ್ರಜ್ಞಾನ ಜೀವನದ ಒಂದು ಭಾಗವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನ ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವ ಕೊಡುಗೆಗಳನ್ನು ನೀಡಬೇಕು ಅಲ್ಲದೇ ನಮ್ಮ ನಿತ್ಯದ ಪಠ್ಯದ ಜೊತೆಗೆ ಇತರ ಚಟುವಟಿಕೆಗಳನ್ನು ರೂಡಿಸಿಕೊಂಡು ಬದುಕಿನ ಆಯಾಮಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಾಹಿತಿ, ಸಂಘಟಕ ಮಾರ್ತಾಂಡಪ್ಪ ಕತ್ತಿ ಹೇಳಿದರು.
ಅವರು ಪಾಪ್ಯುಲರ ವಾಣಿಜ್ಯ ವಿದ್ಯಾ ಶಾಲೆ, ಧಾರವಾಡ ಇದರ ವತಿಯಿಂದ ಜುಲೈ-2025ರಲ್ಲಿ ನಡೆದ ವಾಣಿಜ್ಯ ಹಾಗೂ ಗಣಕಯಂತ್ರದ (ಕಂಪ್ಯುಟರ್) ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಿಳ್ಕೋಡಿಗೆ ಸಮಾರಂಭ ಮತ್ತು ಮಾಕ್ಸ ಕಾರ್ಡ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭವಿಷ್ಯದ ಜೀವನವನ್ನು ಪ್ರಾಮಾಣಿಕತೆ, ಶ್ರದ್ಧೆ, ಆಸಕ್ತಿ, ಉತ್ತಮಗುರಿಯೊಂದಿಗೆ ಹಾಗೂ ಹಿರಿಯ ಮಾರ್ಗದರ್ಶನದೊಂದಿಗೆ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಈ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಮ್ ಎಸ್ ಫರಾಸ್, ಶಾಲೆಯ ಸಂಯೋಜಕರಾದ ಸಂಜನಾ ಮುಳ್ಳೂರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ವಾಣಿಜ್ಯ ವಿದ್ಯಾಶಾಲೆಯ ಪ್ರಾಚಾರ್ಯರಾದ ಸುರೇಶ ಹಾದಿಮನಿ ವಹಿಸಿಕೊಂಡು ಅಭಿಪ್ರಾಯ ವ್ಯಕ್ತಪಡಿಸಿದರು. ಮೇಘಾ ಪಾಟೀಲ ಗಣ್ಯರನ್ನು ಸ್ವಾಗತಿಸಿಕೊಂಡು, ನಿರೂಪಿಸಿದರು. ಶಿವಪ್ರಸಾದ ಕೆ ವಾಯ್ ಪ್ರಾರ್ಥಿಸಿದರು, ಅಂಜಲಿ ವಂದಿಸಿದರು. ನಂತರ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 