ನಾಳೆಯಿಂದ ಆರಂಭವಾಗುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಎದುರಿಸಿ : ಶಿಕ್ಷಣಾಧಿಕಾರಿ ಮೋಹನ ದಂಡಿನ
Students should face the exams starting tomorrow without fear and with peace of mind: Education Offi
ಲೋಕದರ್ಶನ ವರದಿ
ನಾಳೆಯಿಂದ ಆರಂಭವಾಗುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಎದುರಿಸಿ : ಶಿಕ್ಷಣಾಧಿಕಾರಿ ಮೋಹನ ದಂಡಿನ
ಯರಗಟ್ಟಿ 20: ನಾಳೆಯಿಂದ ಆರಂಭವಾಗುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಎದುರಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಹೇಳಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಡಿಬಿಡಿ, ಮಾನಸಿಕ ಒತ್ತಡ, ಉದ್ವೇಗ ಬಿಟ್ಟು ಸಂಯಮದಿಂದ ಪರೀಕ್ಷೆ ಎದುರಿಸಿ, ಪರೀಕ್ಷೆ ದಿನ ಹತ್ತಿರ ಬರುತ್ತಿದ್ದಂತೆ ಸಾಮಾನ್ಯವಾಗಿ ವಿದ್ಯಾರ್ಥಿಗಳು ಆತಂಕಕ್ಕೊಳಗಾಗುತ್ತಾರೆ. ಕೆಲವರು ಮಾನಸಿಕವಾಗಿ ಚಿಂತಾಕ್ರಾಂತರಾಗಿ ಓದಲು ಶುರು ಮಾಡುತ್ತಾರೆ. ಕೆಲವರು ನಿದ್ದೆಬಿಟ್ಟು ಓದುವುದರಿಂದ ಪರೀಕ್ಷೆ ದಿನ ಬರೆಯಲು ಸಂಭವವಿರುತ್ತದೆ. ಹಾಗಾಗಿ, ಮೊದಲು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಬರೆಯಲು ಮುಂದಾಗಬೇಕು ಶಿಕ್ಷಣಾಧಿಕಾರಿ ಸಮೀಪದ ಸತ್ತಿಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದರು. ಈ ವೇಳೆ ಉಪ ಪ್ರಂಶುಪಾಲರಾದ ಶ್ರೀಮತಿ ವಿದ್ಯಾ ಕಲ್ಯಾಣಿ, ಬಿ. ಪಿ. ಅಂಗಡಿ, ಎ. ಎಂ. ಸಿಂಗಾಡಿ, ಎಸ್. ಪಿ. ಮಣ್ಣೂರಮಠ, ಎಸ್. ಸಿ. ಹೊಸಟ್ಟಿ, ವಾಯ್ ಆರ್ ಕೋಟಗಿ, ಎನ್. ಬಿ. ದೊಡ್ಡಗೌಡರ, ಜಿ. ಬಿ. ಪಾಟೀಲ, ಆಯ್. ಎಫ್. ಬಾಗವಾನ, ಎಸ್. ಎಫ್. ಈರಣ್ಣನವರ, ಆರ್. ಎಸ್. ಕಾಶನ್ನವರ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 