ನಾಳೆಯಿಂದ ಆರಂಭವಾಗುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಎದುರಿಸಿ : ಶಿಕ್ಷಣಾಧಿಕಾರಿ ಮೋಹನ ದಂಡಿನ
Students should face the exams starting tomorrow without fear and with peace of mind: Education Offi
ಲೋಕದರ್ಶನ ವರದಿ
ನಾಳೆಯಿಂದ ಆರಂಭವಾಗುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಎದುರಿಸಿ : ಶಿಕ್ಷಣಾಧಿಕಾರಿ ಮೋಹನ ದಂಡಿನ
ಯರಗಟ್ಟಿ 20: ನಾಳೆಯಿಂದ ಆರಂಭವಾಗುವ ಪರೀಕ್ಷೆಯನ್ನು ವಿದ್ಯಾರ್ಥಿಗಳು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಎದುರಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಹೇಳಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಡಿಬಿಡಿ, ಮಾನಸಿಕ ಒತ್ತಡ, ಉದ್ವೇಗ ಬಿಟ್ಟು ಸಂಯಮದಿಂದ ಪರೀಕ್ಷೆ ಎದುರಿಸಿ, ಪರೀಕ್ಷೆ ದಿನ ಹತ್ತಿರ ಬರುತ್ತಿದ್ದಂತೆ ಸಾಮಾನ್ಯವಾಗಿ ವಿದ್ಯಾರ್ಥಿಗಳು ಆತಂಕಕ್ಕೊಳಗಾಗುತ್ತಾರೆ. ಕೆಲವರು ಮಾನಸಿಕವಾಗಿ ಚಿಂತಾಕ್ರಾಂತರಾಗಿ ಓದಲು ಶುರು ಮಾಡುತ್ತಾರೆ. ಕೆಲವರು ನಿದ್ದೆಬಿಟ್ಟು ಓದುವುದರಿಂದ ಪರೀಕ್ಷೆ ದಿನ ಬರೆಯಲು ಸಂಭವವಿರುತ್ತದೆ. ಹಾಗಾಗಿ, ಮೊದಲು ಭಯ ಬಿಟ್ಟು ನಿಶ್ಚಿಂತೆಯಿಂದ ಪರೀಕ್ಷೆ ಬರೆಯಲು ಮುಂದಾಗಬೇಕು ಶಿಕ್ಷಣಾಧಿಕಾರಿ ಸಮೀಪದ ಸತ್ತಿಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದರು. ಈ ವೇಳೆ ಉಪ ಪ್ರಂಶುಪಾಲರಾದ ಶ್ರೀಮತಿ ವಿದ್ಯಾ ಕಲ್ಯಾಣಿ, ಬಿ. ಪಿ. ಅಂಗಡಿ, ಎ. ಎಂ. ಸಿಂಗಾಡಿ, ಎಸ್. ಪಿ. ಮಣ್ಣೂರಮಠ, ಎಸ್. ಸಿ. ಹೊಸಟ್ಟಿ, ವಾಯ್ ಆರ್ ಕೋಟಗಿ, ಎನ್. ಬಿ. ದೊಡ್ಡಗೌಡರ, ಜಿ. ಬಿ. ಪಾಟೀಲ, ಆಯ್. ಎಫ್. ಬಾಗವಾನ, ಎಸ್. ಎಫ್. ಈರಣ್ಣನವರ, ಆರ್. ಎಸ್. ಕಾಶನ್ನವರ ಸೇರಿದಂತೆ ಅನೇಕರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 