ವಿದ್ಯಾರ್ಥಿಗಳು ಪುಸ್ತಕಗಳ ಜೊತೆಗೆ ಪರಿಸರದ ಕಡೆಗೆ ಗಮನಹರಿಸಬೇಕು: ಪುಣೇಕರ್
ವಿಜಯಪುರ 05 ವಿಜಯಪುರ ನಗರದ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಸಿಕ್ಯಾಬ್ ಪದವಿ ಪೂರ್ವ ಮಹಿಳಾ ಕಾಲೇಜಿನ 2025-26 ನೇ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಯ ನಿರ್ದೇಶಕರಾದ ಸಲಾವುದ್ದಿನ್ ಪುಣೇಕರ್ ಮಾತನಾಡಿದರು.
ಈ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಗಳ ಜೊತೆಗೆ ಪರಿಸರದ ಕಡೆಗೆ ಗಮನಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾಭ್ಯಾಸ ಮಾಡಬೇಕು ಎಂದರು. ಇಂದಿನ ವಿದ್ಯಾರ್ಥಿಗಳು ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಬಾಂದವ್ಯ ಬೆಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.ಸಿಕ್ಯಾಬ್ ಪಿಯು ಕಾಲೇಜುಗಳ ಡೀನ್ ಎನ್. ಎಸ್. ಬೂಸನೂರ ಅವರು ಮಾತನಾಡಿ ವಿದ್ಯಾರ್ಥಿಗಳಾದವರು ಕೇವಲ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಮೇಲೆ ಸಿಮಿತವಾಗಿರಬಾರದು, ಅದಕ್ಕಿಂತ ಹೆಚ್ಚಿನದನ್ನು ಇತರ ವಿಷಯಗಳಲ್ಲೂ ಜ್ಞಾನಾರ್ಜನೆಯನ್ನು ಪಡೆಯಬೇಕು.ಈ ಎರಡು ವರ್ಷಗಳು ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ಹಾಗೆಯೇ ತಮ್ಮ ಪೋಷಕರು ಮತ್ತು ಶಿಕ್ಷಕರ ನೀರೀಕ್ಷೆಗಳನ್ನು ಈಡೇರಿಸಲು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮತ್ತು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲು ತಮ್ಮ ಶಿಕ್ಷಕರ ಸಂಪೂರ್ಣ ಸಹಾಯ ಮತ್ತು ಮಾರ್ಗದರ್ಶನ ಪಡೆದುಕೊಳ್ಳುವಂತೆ ಅವರು ಪ್ರೇರೇಪಿಸಿದರು.
ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆಯನ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆಯಿಶಾ ಜಾಘಿರದಾರ, ಸ್ವಾಲೇಹಾ ಶೇಖ್, ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ. ಎಂ. ಗುರಡಿ, ಉಪ ಪ್ರಾಂಶುಪಾಲರಾದ ಡಾ. ಸಾದಿಕಾ ದಫೇದಾರ, ಹಾಗೂ ಉಪನ್ಯಾಸಕರಾದ ಎಸ್. ಆರ್. ಬ್ಯಾಕೋಡ, ಯು. ಎನ್. ಕುಂಟೊಜಿ, ರಿಯಾಜ್ ಜೀರಗಾಳ, ಮತ್ತಿತರರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 