ವಿದ್ಯಾರ್ಥಿಗಳು ಶಾಲೆಗಳಲ್ಲಿ ವೇದಿಕೆ ಬಳಸಿಕೊಂಡು ತಮ್ಮ ಪ್ರತಿಭೆ ಹೊರಹಾಕಿ : ದುಂಡಿಗೌಡ್ರ
Students should use the platform in schools to showcase their talent: Dundigowdra
ಶಿಗ್ಗಾವಿ 14 : ವಿದ್ಯಾರ್ಥಿಗಳು ಶಾಲೆಗಳಲ್ಲಿ ಸಿಗುವಂತಹ ವೇದಿಕೆಯನ್ನು ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ ತಮ್ಮ ಮುಂದಿನ ಜೀವನದ ದಾರಿಯನ್ನು ಸುಗಮಗೊಳಿಸಿಕೊಳ್ಳಬೇಕೆಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ದುಂಡಸಿ ಗ್ರಾಮದ ಶ್ರೀ ಗಾಯತ್ರಿ ಕಾನ್ವೆಂಟ್ ಶಾಲೆಯಲ್ಲಿ ನಡೆದ ಸಮೂಹ ಸಂಪನ್ಮೂಲ ಕೇಂದ್ರದ, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಸೋಲು ಗೆಲುವನ್ನು ಪರಿಗಣಿಸದೆ, ಆತ್ಮವಿಶ್ವಾಸದಿಂದ ಸ್ಪರ್ಧೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಹೇಳಿದರು.
ಸಾಹಿತಿ ಶಿವಾನಂದ ಮ್ಯಾಗೇರಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಒಂದು ನವೀನ ಕಾರ್ಯಕ್ರಮವಾಗಿದ್ದು, ಶಿಕ್ಷಣದ ಜೊತೆಗೆ ನಡೆಯುವ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಹೊಸೂರ ಗ್ರಾಮ ಪಂಚಾಯತ ಅಧ್ಯಕ್ಷೆ ರಾಜೇಶ್ವರಿ ಲಮಾಣಿ, ಎನ್ ಬಿ ಕುಲಕರ್ಣಿ, ನರಹರಿ ಕಟ್ಟಿ, ನಾಗರಾಜ ಸೊರಗೊಂಡ, ಅಜ್ಜಪ್ಪ ಲಮಾಣಿ, ವೀರನಗೌಡ ಪಾಟೀಲ, ಅಣ್ಣಪ್ಪ ಲಮಾಣಿ, ಶಿವನಗೌಡ ಪಾಟೀಲ, ಮಹಾವೀರ ಧಾರವಾಡ ಹಾಗೂ ವಿವಿಧ ಶಾಲೆಗಳ ಶಿಕ್ಷಕ,ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 