ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನ
Students volunteer at the police station
ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನ
ತಾಳಿಕೋಟಿ 29: ಪಟ್ಟಣದ ಎಸ್.ಕೆ.ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಎನ್.ಎಸ್. ಎಸ್. ಎನ್.ಸಿ.ಸಿ. ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸ್ವಚ್ಛತಾ (ಶ್ರಮದಾನ) ಕಾರ್ಯಕ್ರಮ ಸೋಮವಾರ ಹಮ್ಮಿಕೊಳ್ಳಲಾಯಿತು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಠಾಣಾ ಪಿಎಸ್ಐ ಆರ್.ಎಸ್. ಭಂಗಿ ಅವರು ಸ್ವಚ್ಛತೆಯ ಮಹತ್ವದ ಕುರಿತು ಮಾತನಾಡಿ ವಿದ್ಯಾರ್ಥಿಗಳ ಶ್ರಮದಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಪೋಕ್ಸೋ, ಸೈಬರ್ ಅಪರಾಧಗಳು, ರಸ್ತೆ ಸುರಕ್ಷತಾ ನಿಯಮ ಹಾಗೂ ಕಳ್ಳತನದ ಪ್ರಕರಣಗಳನ್ನು ತಡೆಯಲು ಅನುಸರಿಸಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು.
ಎನ್.ಎಸ್. ಎಸ್.ಅಧಿಕಾರಿ ಡಾ.ಅಜಯ ಅಬ್ಬಾರ್, ಈರಮ್ಮ, ಎನ್.ಸಿ.ಸಿ. ಅಧಿಕಾರಿ ಡಾ.ರಾಘವೇಂದ್ರ, ಸ್ಕೈಟ್ಸ್ ಮತ್ತು ಗೈಡ್ಸ್ ಮುಖ್ಯಸ್ಥ ಡಾ.ಅಶೋಕ ಹಾಗೂ ಠಾಣಾ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 