ಸಕಲ ಸರ್ಕಾರಿ ಗೌರವದೊಂದಿಗೆ ಸುಬೇಧಾರ ಧರ್ಮರಾಜ ಅಂತಿಮ ಸಂಸ್ಕಾರ
Subedar Dharmaraja cremated with full state honours
ಚಿಕ್ಕೋಡಿ 27: ಕಳೆದ ಸೋಮವಾರ ದಿ.23 ರಂದು ಮಣಿಪುರದ ರಾಜ್ಯದ ಬಂಬಲಾ ಗ್ರಾಮದ ಹತ್ತಿರ ಘಾಟಿನಿಂದ ಕೆಳಗೆ ಬರುವಾಗ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ಚಿಕ್ಕೋಡಿ ತಾಲೂಕಿನ ಕುಪ್ಪಾಣವಾಡಿ ಗ್ರಾಮದ ಸುಬೇಧಾರ ಧರ್ಮರಾಜ ಸುಭಾಷ ಖೋತ ಪಾರ್ಥಿವ ಶರೀರ ಗುರುವಾರ ಆಗಮಿಸಿದ ಹಿನ್ನಲ್ಲೆಯಲ್ಲಿ ಸರ್ಕಾರಿ ಗೌರವದೊಂದಿಗೆ ವೀರಯೋಧನ ಅಂತಿಮ ವಿಧಿವಿಧಾನ ಜರುಗಿತು.
ವೀರಯೋಧ ಧರ್ಮರಾಜ ಖೋತ ಪಾರ್ಥಿವ ಶರೀರ ಮಣಿಪುರದಿಂದ ವಿಶೇಷ ವಿಮಾನದ ಮೂಲಕ ಗೋವಾಕ್ಕೆ ಬಂದು ಅಲ್ಲಿಂದ ಬೆಳಗಾವಿ ಮರಾಠ ಲೈಪ್ ಇನ್ಫಂಟ್ರಿಗೆ ಆಗಮೀಸಿ ಅಲ್ಲಿಂದ ಸೇನಾ ವಾಹನದಲ್ಲಿ ನೇರವಗಿ ಕುಪ್ಪಾಣವಾಡಿಗೆ ಆಗಮೀಸಿತು. ವೀರಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮೀಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಗಿಲು ಮುಟ್ಟಿತ್ತು. ವೀರಯೋಧನಿಗೆ ತಂದೆ ಸುಭಾಷ, ತಾಯಿ ಶಕುಂತಲಾ, ಪತ್ನಿ ಶ್ರದ್ಧಾ ಮತ್ತು ಇಬ್ಬರು ಗಂಡು ಮಕ್ಕಳು ತಂದೆಯ ಪಾರ್ಥಿವ ಶರೀರ ನೋಡಿ ರೋಧಿಸಿದರು.
ಪಾರ್ಥಿವ ಶರೀರ ಗ್ರಾಮಕ್ಕೆ ಆಗಮೀಸುತ್ತಿದ್ದಂತೆ ಗ್ರಾಮಸ್ಥರು ಮತ್ತು ಮಾಜಿ ಸೈನಿಕರು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಧರ್ಮರಾಜ ಅಮರಹೇ ಎಂದು ಘೋಷನೆ ಮೊಳಗಿಸಿದರು. ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಮುಂತಾದವರು ವೀರಯೋಧನಿಗೆ ನಮನ ಸಲ್ಲಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 