ದೇಶಕ್ಕೆ ಸುಭಾಷ್ ಚಂದ್ರ ಬೋಸ್ ಕೊಡುಗೆ ಅಪಾರ : ಪ್ರಧಾನಿ ಮೋದಿ
ಕೋಲ್ಕತಾ/ನವದೆಹಲಿ, ಜ 23, ದೇಶಾದ್ಯಂತ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು" ಎಂದು ಬರೆದಿದ್ದಾರೆ. ಈ ಮಗ ಒಬ್ಬ ಧೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದರು. ಅವರು, ತಮ್ಮ ಜೀವನವನ್ನು ಒಂದು ಭಾರತದ ಸ್ವಾತಂತ್ರ್ಯವೆಂಬ ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟರು ಎಂದಿರುವ ಮೋದಿ, ನೇತಾಜಿಯವರ ಜಯಂತಿಯನ್ನು ಹೆಮ್ಮೆಯಿಂದ ಸ್ಮರಿಸುವುದಾಗಿ ತಿಳಿಸಿದ್ದಾರೆ. ಬೋಸ್ ಜನ್ಮದ ದಿನದ ಅಂಗವಾಗಿ ಪಶ್ಚಿಮ ಬಂಗಾಳ ಸರ್ಕರ ರಾಜ್ಯಾದ್ಯಂತ ‘ಸುಭಾಷ್ ಉತ್ಸವ’ ಆಯೋಜಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟ್ವಿಟರ್ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 