ಆಥರ್ಿಕ ಅಪರಾಧ ನಿಯಂತ್ರಣ ವಿಧೇಯಕಕ್ಕೆ ಅಸ್ತು
ನವದೆಹಲಿ 25: ಮದ್ಯದ ದೊರೆ ವಿಜಯ್ ಮಲ್ಯ ಹಾಗೂ ಉದ್ಯಮಿ ನೀರವ್ ಮೋದಿಯಂತಹ ದೊಡ್ಡ ಆಥರ್ಿಕ ಅಪರಾಧಿಗಳನ್ನು ಮಟ್ಟಹಾಕುವ ದೇಶಭ್ರಷ್ಟ ಆಥರ್ಿಕ ಅಪರಾಧ ನಿಯಂತ್ರಣ ವಿಧೇಯಕ 2018ಕ್ಕೆ ಬುಧವಾರ ರಾಜ್ಯಸಭೆ ಅಂಗೀಕಾರ ನೀಡಿದೆ. ಜುಲೈ 19ರಂದು ಲೋಕಸಭೆಯಲ್ಲಿ ಪಾಸ್ ಆಗಿದ್ದ ದೇಶಭ್ರಷ್ಟ ಆಥರ್ಿಕ ಅಪರಾಧ ನಿಯಂತ್ರಣ ವಿಧೇಯಕವನ್ನು ಇಂದು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಇತ್ತೀಚಿಗೆ ಆಥರ್ಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾಗಿ ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಸದ್ಯದ ಕಾನೂನಿಂದ ಅದನ್ನು ತಡೆಯಲು ಸಾಧ್ಯವಿಲ್ಲ. ಹೀಗಾಗಿ ಹೊಸ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಹಣಕಾಸು ಸಚಿವ ಪಿಯೂಶ್ ಗೋಯಲ್ ಅವರು ಹೇಳಿದ್ದಾರೆ.
ಪ್ರಸ್ತುತ ಅಪರಾಧ ಕಾನೂನು ಆಥರ್ಿಕ ಅಪರಾಧಿಗಳ ಆಸ್ತಿ ಜಪ್ತಿ ಮಾಡಲು ಸಾಧ್ಯವಿಲ್ಲ. ಈ ವಿಧೇಯಕ ಆಸ್ತಿ ಮತ್ತು ಸಂಪತ್ತನ್ನು ಜಪ್ತಿ ಮಾಡುವ ಅಧಿಕಾರ ನೀಡುತ್ತದೆ ಎಂದಿದ್ದಾರೆ.
ಆಥರ್ಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾಗಿ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ನಿರಸನಗೊಳಿಸುವವರ ಯತ್ನಗಳನ್ನು ತಡೆದು ಅವರನ್ನು ಕಾನೂನು ಪ್ರಕಾರ ಶಿಕ್ಷಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಗೋಯಲ್ ಹೇಳಿದ್ದಾರೆ.
ಈ ಹೊಸ ಕಾನೂನಿನಡಿ ಜಾರಿ ನಿದರ್ೆಶನಾಲಯ ಆಥರ್ಿಕ ಅಪರಾಧಗಳ ತನಿಖೆ ನಡೆಸಲಿದ್ದು, ತನಿಖಾ ಸಂಸ್ಥೆಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 