ಕಟ್ಟಡ,ಇತರೆ ನಿರ್ಮಾಣ ಕಾರ್ಮಿಕರಿಗೆ ಸಹಾಯಧನ ನೀಡಿ
ಲೋಕದರ್ಶನವರದಿ
ಕಂಪ್ಲಿ.18 ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಘೋಷಣೆಯಾದ 5ಸಾವಿರ ರೂಪಾಯಿಗಳನ್ನು ಎಲ್ಲ ಕಾಮರ್ಿಕರ ಖಾತೆಗೆ ವಗರ್ಾವಣೆ ಮಾಡಬೇಕು ಎಂದು ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕು ಅಧ್ಯಕ್ಷ ಹೊನ್ನೂರಸಾಬ ಆಗ್ರಹಿಸಿದರು. ತಹಸೀಲ್ದಾರ್ ಎಂ.ರೇಣುಕಾ ಅವರಿಗೆ ಸೋಮವಾರ ಮನವಿ ಸಲ್ಲಿಸಿ, ಕೆಲ ಕಾಮರ್ಿಕರಿಗೆ ಸಹಾಯ ಧನ ಜಮೆಯಾಗಿದ್ದು, ಹಲವರಿಗೆ ಜಮೆಯಾಗಿಲ್ಲ. ಎಲ್ಲ ಕಾಮರ್ಿಕರ ಖಾತೆಗೂ ಜಮೆಯಾಗಬೇಕು. ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಬೆಲೆ ನಿಯಂತ್ರಿಸಬೇಕು. ವಲಸೆ ಕಾಮರ್ಿಕರ ಬದುಕನ್ನು ರಕ್ಷಿಸಬೇಕು, ಅವರ ಮೂಲ ಸ್ಥಳಗಳಿಗೆ ತೆರಳಲು ಉಚಿತ ರೈಲು ವ್ಯವಸ್ಥೆ ಮಾಡಿಕೊಡಬೇಕು. ಮೃತಪಟ್ಟ ವಲಸೆ ಕಾರ್ಮಿಕ ಕುಟುಂಬಗಳಿಗೆ 10ಲಕ್ಷ ರೂ.ಗಳ ಪರಿಹಾರ ನೀಡಬೇಕು. ಎಲ್ಲ ಕಟ್ಟಡ ಕಾಮರ್ಿಕರಿಗೆ ಮೂರು ತಿಂಗಳು ಉಚಿತ ರೇಷನ್ ಕಿಟ್ ಒದಗಿಸಬೇಕು. ಕಾರ್ಮಿಕ ಕಾನೂನುಗಳ ತಿದ್ದುಪಡಿ, ಅಮಾನತ್ ಪ್ರಸ್ತಾಪಗಳನ್ನು ಕೈಬಿಡಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಮತ್ತು ಖಾಸಗೀಕರಣ ಕೈಬಿಡಬೇಕು. ಆನಂದ್ ತೇಲ್ತುಂಬೆ ಸೇರಿ ಪ್ರಗತಿಪರ ಚಿಂತಕರನ್ನು ಬಂದಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಸಂಚಾಲಕ ಬಂಡಿ ಬಸವರಾಜ, ರಾಜ್ಯ ಕಟ್ಟಡ ಮತ್ತು ಇತರ ನಿಮರ್ಾಣ ಕಾಮರ್ಿಕರ ಫೆಡರೇಷನ್ ಪದಾಧಿಕಾರಿಗಳಾದ ಆರ್.ನಾಗರಾಜ, ಭೀಮಣ್ಣ, ಚಂದ್ರಶೇಖರ್, ನಾಗರಾಜ, ಬಿ.ನಾರಾಯಣಪ್ಪ, ಅಮರೇಶ್, ಶೇಖರ್, ರವಿ, ರಾಜಭಕ್ಷಿ, ಪ್ರಕಾಶ್, ರಾಘವೇಂದ್ರ ಇತರರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 