ಸರ್ಕಾರದ ಯೋಜನೆಯನ್ನು ಯಶಸ್ವಿಗೊಳಿಸಿ: ಡಾ.ಮಲಘಾಣ
ಲೋಕದರ್ಶನವರದಿ
ಮುಧೋಳ: ಕುಷ್ಠರೋಗ ಪ್ತೆ ಹಚ್ಚುವ ಅಭಿಯಾನಇದೇ ದಿ.25 ರಿಂದ ಡಿ.11 ವರೆಗೆ ನಡೆಯಲಿದ್ದು, ತಾಲ್ಲೂಕಿನಲ್ಲಿ 64329 ಕುಟುಂಬಗಳನ್ನು ಸಂಪರ್ಕಿಸಲಾಗುವುದು ಇದಕ್ಕಾಗಿ 240 ತಂಡಗಳನ್ನು ರಚಿಸಲಾಗಿದೆ. 480 ಜನರು ಸಮೀಕ್ಷೆ ಮಾಡಲಿದ್ದಾರೆ.48 ಮೇಲ್ವಿಚಾರಕರ ನೇತೃತ್ವದಲ್ಲಿ ನಡೆಯುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ ಮಲಘಾಣ ಹೇಳಿದರು.
ಅವರು ಶನಿವಾರ ನಗರದ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ನಡೆದ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಹಾಗೂ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಮಾತನಾಡಿ ಸಿಬ್ಬಂದಿ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದರ ಮೂಲಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಬಿಎಚ್ ಇಒ ಹರಿಶ್ಚಂದ್ರ ಕುಲ್ಲೋಳಿ, ರವೀಂದ್ರ ಹೊಸಗೌಡರ, ಹಿರಿಯಎಚ್.ಐ ಡಿ.ಬಿ.ನಾಗನೂರ ತರಬೇತಿ ನೀಡಿ ಯೋಜನೆ ವಿವರ ತಿಳಿಸಿದರು.
ತಾಲ್ಲೂಕು ಪಂಚಾಯ್ತಿ ಸದಸ್ಯ ಡಾ.ಸಿ.ಎಚ್.ಡೋಣಿ, ಪತ್ರಕರ್ತರಾದ ಉದಯ ಕುಲಕರ್ಣಿ, ಗಣೇಶ ಮೇತ್ರಿ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 